ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಸ್ಪತ್ರೆಗೆ ದಾಖಲು
ಬೆಂಗಳೂರು, 11 ಅಧಿಕ ರಕ್ತದೊತ್ತಡ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ
ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.ಇಂದು ಬೆಳಗ್ಗೆ
6:30ರ ಸುಮಾರಿಗೆ ಅವರಿಗೆ ರಕ್ತದೊತ್ತಡ ಜಾಸ್ತಿಯಾಗಿದ್ದು, ಸ್ವಲ್ಪ ಪ್ರಮಾಣದಲ್ಲಿ ಎದೆನೋವು ಕೂಡ
ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರ ಸಂಬಂಧಿಕರು ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಇತ್ತೀಚಿಗೆ ಉಪಚುನಾವಣೆಯಲ್ಲಿ
ಸಕ್ರಿಯವಾಗಿದ್ದ ಸಿದ್ದರಾಮಯ್ಯ ಅವರು ಸ್ವಲ್ಪ ದಣಿದಿದ್ದರು. ಹೀಗಾಗಿ ಅವರಿಗೆ ರಕ್ತದೊತ್ತಡ ಜಾಸ್ತಿಯಾಗಿದ್ದು, ಅವರ ಕುಟುಂಬ ವೈದ್ಯರ
ಸಲಹೆಯ ಮೇರೆಗೆ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಬರಲಾಗಿದೆ. ಆದರೆ, ಅಲ್ಲಿ ಅವರು ದಾಖಲಾಗುವುದಿಲ್ಲ.
ತಪಾಸಣೆಯ ಬಳಿಕ ಅವರು ವಾಪಸ್ ಮನೆಗೆ ಕಳುಹಿಸಲಾಗುವುದು ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.
ಉಪಚುನಾವಣೆಯ ಕಾಂಗ್ರೆಸ್ ನೇತೃತ್ವ
ವಹಿಸಿದ್ದ ಸಿದ್ದರಾಮಯ್ಯ, 15 ಕ್ಷೇತ್ರಗಳಲ್ಲಿ 2 ಕ್ಷೇತ್ರದಲ್ಲಿ ಮಾತ್ರ ಪಕ್ಷವನ್ನು ಗೆಲ್ಲಿಸುವಲ್ಲಿ
ಯಶಸ್ವಿಯಾಗಿದ್ದರು. ಬಳಿಕ ಸೋಲಿನ ನೈತಿಕ ಹೊಣೆ ಹೊತ್ತು ಶಾಸಕಾಂಗ ಪಕ್ಷದ ನಾಯಕ ಸ್ಥಾನಕ್ಕೆ ರಾಜೀನಾಮೆ
ನೀಡಿದ್ದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 