ವಂಚನೆ ಆರೋಪ : ಮಾಜಿ ಕ್ರಿಕೆಟಿಗ ಅಜರುದ್ದೀನ್ ವಿರುದ್ಧ ಪ್ರಕರಣ ದಾಖಲು
ಔರಂಗಾಬಾದ್, ಜನವರಿ 23' ಭಾರತದ ತಂಡದ ಮಾಜಿ ನಾಯಕ ಮತ್ತು ಕ್ರಿಕೆಟಿಗ ಮೊಹಮ್ಮದ್ ಅಜರುದ್ದೀನ್ ಮತ್ತು ಇತರ ಇಬ್ಬರ ವಿರುದ್ಧ ಟೂರ್ಸ್ ಮತ್ತು ಟ್ರಾವೆಲ್ಸ್ ಏಜೆನ್ಸಿಗೆ 20.96 ಲಕ್ಷ ರೂಪಾಯಿಗೆ ಮೋಸ ಮಾಡಿದ ಆರೋಪದ ಮೇಲೆ ವಂಚನೆ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಔರಂಗಾಬಾದ್ ಲೇಬರ್ ಕಾಲೋನಿ ನಿವಾಸಿ ಏಜೆನ್ಸಿ ಮೊಹಮ್ಮದ್ ಶಹಾಬ್ ಮೊಹಮ್ಮದ್ ಯಾಕೂಬ್ ಎಂಬುವವರು ಅಜರ್ ವಿರುದ್ದ ದೂರು ನೀಡಿದ್ದಾರೆ. ಪೊಲೀಸರ ಪ್ರಕಾರ, ಮೊಹಮ್ಮದ್ ಅಜರುದ್ದೀನ್ ಅವರ ವೈಯಕ್ತಿಕ ಕಾರ್ಯದರ್ಶಿ ಮುಜೀಬ್ ಖಾನ್ ಡ್ಯಾನಿಶ್ ಟೂರ್ಸ್ ಮತ್ತು ಟ್ರಾವೆಲ್ಸ್ ಏಜೆನ್ಸಿಯನ್ನು ಸಂಪರ್ಕಿಸಿ, ಮುಂಬೈ-ದುಬೈ-ಪ್ಯಾರಿಸ್ ವಿಮಾನಯಾನ ಟಿಕೆಟ್ ಗಳನ್ನು ಸುದೇಶ್ ಅವ್ವೇಕಲ್ (ಕೇರಳ) ಮತ್ತು ಮೊಹಮ್ಮದ್ ಅಜರುದ್ದೀನ್ ಗಾಗಿ ಕಾಯ್ದಿರಿಸಿದ್ದರು. ನವೆಂಬರ್, 2019 ರಲ್ಲಿ. ವಿಮಾನದ ಟಿಕೆಟ್ ಖರೀದಿ ಸಂಬಂದ ಮುಜೀಬ್ ಖಾನ್ ನೀಡಿದ್ದ ಚೆಕ್ ಬ್ಯಾಂಕಿನಲ್ಲಿ ಅಮಾನ್ಯವಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.ಇದಲ್ಲದೆ ಹಣಕ್ಕಾಗಿ ಮಾಲೀಕರು ಪದೆ ಪದೆ ಮನವಿ ಮಾಡಿದರೂ ಹಣ ಕೊಡದೆ ಸತಾಯಿಸಿದ್ದಾರೆ. ದೂರಿನ ಆಧಾರದ ಮೇಲೆ ಪೊಲೀಸರು ಮೇಲೆ ಮೂವರ ವಿರುದ್ಧ ಎಫ್ಐಆರ್ ದಾಖಲಿಸಿ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 