ಆನ್ ಲೈನ್ ಮದ್ಯ ಮಾರಾಟಕ್ಕೆ ಮಾಜಿ ಸಚಿವ ತಿಮ್ಮಾಪುರ ಒತ್ತಾಯ
ಬಾಗಲಕೋಟೆ, ಏ 12,ರಾಜ್ಯ ಸರ್ಕಾರ ಕೂಡ ಕೇರಳ ಮಾದರಿಯಲ್ಲಿ ಆನ್ ಲೈನ್ ಮೂಲಕ ಮದ್ಯ ಮಾರಾಟ ಆರಂಭಿಸಬೇಕು ಎಂದು ಮಾಜಿ ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಒತ್ತಾಯಿಸಿದ್ದಾರೆ. ಬಾಗಲಕೋಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಾಜ್ಯದಲ್ಲಿ ಕೊರೊನಾ ಹಾಗೂ ಲಾಕ್ ಡೌನ್ ನಿಂದ ಮದ್ಯ ಮಾರಾಟ ಬಂದ್ ಮಾಡಲಾಗಿದ್ದು ಪರಿಣಾಮ ಮದ್ಯ ಸಿಗದೆ 20 ಜನರು ಸತ್ತಿದ್ದಾರೆ ಎಂಬ ವರದಿಗಳು ಬಂದಿವೆ ಈ ಕಾರಣಕ್ಕಾಗಿ ಸರ್ಕಾರ ಆನ್ ಲೈನ್ ಮೂಕಲ ಮದ್ಯ ಮಾರಾಟ ಮಾಡಬೇಕು ಎಂದು ಅವರು ಹೇಳಿದರು. ರಾಜ್ಯ ಸರ್ಕಾರವು ಸದ್ಯ ಆನ್ ಲೈನ್ ನಲ್ಲಿ ಮದ್ಯ ಮಾರಾಟ ಆರಂಭಿಸಿದರೆ ಒಳ್ಳೆಯದು ಇದರಿಂದಾಗಿ ಸರ್ಕಾರಕ್ಕೂ ಆದಾಯ ಬರುತ್ತದೆ. ಕಳ್ಳಭಟ್ಟಿ ವ್ಯವಹಾರಗಳಿಗೂ ಕಡಿವಾಣ ಬೀಳಲಿದೆ ಎಂದು ಹೇಳಿದರು.ಸಾರಾಯಿ ಸಂಪೂರ್ಣವಾಗಿ ಬಂದ್ ಆಗಿದ್ದರೆ ಸಂತೋಷವಿತ್ತು. ಎಷ್ಟು ಜನ ಸಾಯುತ್ತಿದ್ದರು. ಆದರೆ ಈಗ ಸಾರಾಯಿ ಸಂಪೂರ್ಣ ಬಂದ್ ಆಗಿಲ್ಲ ನೂರು, ಸಾವಿರಕ್ಕೆ ಅಂದರೆ ದುಪ್ಪಟ್ಟು ಬೆಲೆಗೆ ಮಾರಾಟ ಮಾಡುಲಾಗುತ್ತಿದೆ ದುಡ್ಡು ಇದ್ದವರಿಗೆ ಮದ್ಯ ಸಿಗುತ್ತದೆ. ತೀರಾ ಬಡವರಿಗೆ ಸಿಗುತ್ತಿಲ್ಲ ಇದರ ಬದಲಿಗೆ ಸರ್ಕಾರ ಆನ್ ಲೈನ್ ಮೂಲಕ ಮದ್ಯ ಮಾರಾಡ ಮಾಡಿದರೆ ಇಂತಹ ಅನೇಕ ಲೋಪದೋಷಗಳನ್ನು ತಡೆಯಬಹುದು ಎಂದು ಅವರು ಸಲಹೆ ಮಾಡಿದ್ದಾರೆ .
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 