ಮಾಜಿ ಸಚಿವ ತಿಪ್ಪೇಸ್ವಾಮಿ ನಿಧನ
ಬೆಂಗಳೂರು 08: ಮಾಜಿ ಸಚಿವ, ಚಳ್ಳಕೆರೆ ಕ್ಷೇತ್ರದ ಮೂರು ಬಾರಿಯ ಶಾಸಕ, ವಾಲ್ಮೀಕಿ ಸಮುದಾಯದ ನಾಯಕ ತಿಪ್ಪೇಸ್ವಾಮಿ ಅವರು ಬುಧವಾರ ಬೆಳಗ್ಗೆ ನಗರದ ಕೊಲಂಬಿಯಾ ಏಷಿಯಾ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಅವರಿಗೆ 76 ವರ್ಷ ವಯಸ್ಸಾಗಿತ್ತು.
ಕಳೆದ ಕೆಲ ದಿನಗಳಿಂದ ತೀವ್ರ ಅನಾರೋಗ್ಯಕ್ಕೀಡಾಗಿ ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದರು. ತವರು ಗ್ರಾಮ ಚಿತ್ರದುರ್ಗದ ಚಳ್ಳಕೆರೆ ಗ್ರಾಮದ ಕಾಳಪ್ಪನ ಹಟ್ಟಿಯಲ್ಲಿ ಅಂತಿಮ ದರ್ಶನದ ಬಳಿಕ ಅಂತ್ಯ ಸಂಸ್ಕಾರ ನಡೆಯಲಿದೆ.
ಜೆಡಿಎಸ್ ಪಕ್ಷದಿಂದ ಶಾಸಕರಾಗಿ ಆಯ್ಕೆಯಾಗಿದ್ದ ಅವರು ಎಚ್.ಡಿ.ದೇವೇಗೌಡ ಅವರ ಸಂಪುಟದಲ್ಲಿ ಅಬಕಾರಿ ಖಾತೆ, ಜೆ.ಎಚ್.ಪಟೇಲ್ ಅವರ ಸಂಪುಟದಲ್ಲಿ ಸಣ್ಣ ನೀರಾವರಿ ಸಚಿವರಾಗಿದ್ದರು. ಜೆಡಿಎಸ್ ತೊರೆದಿದ್ದ ಅವರು ಬಿಜೆಪಿಗೆ ಸೇರ್ಪಡೆಯಾಗಿದ್ದರು.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 