ಮಾಜಿ ಸಚಿವ ತಿಪ್ಪೇಸ್ವಾಮಿ ನಿಧನ
ಬೆಂಗಳೂರು 08: ಮಾಜಿ ಸಚಿವ, ಚಳ್ಳಕೆರೆ ಕ್ಷೇತ್ರದ ಮೂರು ಬಾರಿಯ ಶಾಸಕ, ವಾಲ್ಮೀಕಿ ಸಮುದಾಯದ ನಾಯಕ ತಿಪ್ಪೇಸ್ವಾಮಿ ಅವರು ಬುಧವಾರ ಬೆಳಗ್ಗೆ ನಗರದ ಕೊಲಂಬಿಯಾ ಏಷಿಯಾ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಅವರಿಗೆ 76 ವರ್ಷ ವಯಸ್ಸಾಗಿತ್ತು.
ಕಳೆದ ಕೆಲ ದಿನಗಳಿಂದ ತೀವ್ರ ಅನಾರೋಗ್ಯಕ್ಕೀಡಾಗಿ ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದರು. ತವರು ಗ್ರಾಮ ಚಿತ್ರದುರ್ಗದ ಚಳ್ಳಕೆರೆ ಗ್ರಾಮದ ಕಾಳಪ್ಪನ ಹಟ್ಟಿಯಲ್ಲಿ ಅಂತಿಮ ದರ್ಶನದ ಬಳಿಕ ಅಂತ್ಯ ಸಂಸ್ಕಾರ ನಡೆಯಲಿದೆ.
ಜೆಡಿಎಸ್ ಪಕ್ಷದಿಂದ ಶಾಸಕರಾಗಿ ಆಯ್ಕೆಯಾಗಿದ್ದ ಅವರು ಎಚ್.ಡಿ.ದೇವೇಗೌಡ ಅವರ ಸಂಪುಟದಲ್ಲಿ ಅಬಕಾರಿ ಖಾತೆ, ಜೆ.ಎಚ್.ಪಟೇಲ್ ಅವರ ಸಂಪುಟದಲ್ಲಿ ಸಣ್ಣ ನೀರಾವರಿ ಸಚಿವರಾಗಿದ್ದರು. ಜೆಡಿಎಸ್ ತೊರೆದಿದ್ದ ಅವರು ಬಿಜೆಪಿಗೆ ಸೇರ್ಪಡೆಯಾಗಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 