ನಾಲ್ಕು ಕಂಟ್ರಿಮೇಡ್ ಪಿಸ್ತೂಲ್ ಪತ್ತೆ: ಚುರುಕುಗೊಂಡ ತನಿಖೆ
ಬೆಳಗಾವಿ, ಫೆ.12, ಕಸದ ರಾಶಿಯಲ್ಲಿ ನಾಲ್ಕು ಕಂಟ್ರಿಮೇಡ್ ಪಿಸ್ತೂಲ್ ಗಳು ಪತ್ತೆಯಾಗಿದ್ದು, ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೂ ಸಂಬಂಧವಿದೇಯಾ ? ಎಂಬುದರ ಕುರಿತುಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.ಬೆಳಗಾವಿ ತಾಲೂಕಿನ ವಾಘವಾಡೆ ಗ್ರಾಮದಲ್ಲಿ ಸ್ಥಳೀಯರು ಸ್ಥಳ ಸ್ವಚ್ಛಗೊಳಿಸುವ ವೇಳೆಯಲ್ಲಿ ನಾಲ್ಕು ಕಂಟ್ರಿಮೇಡ್ ಪಿಸ್ತೂಲ್ ಪತ್ತೆಯಾಗಿವೆ.ಮಣ್ಣಿನಲ್ಲಿ ಹೂತಿಟ್ಟದ್ದರಿಂದ ಪಿಸ್ತೂಲ್ ಗಳು ತುಕ್ಕು ಹಿಡಿದಿವೆ. ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಆರೋಪಿಗಳಿಗೆ ಪಿಸ್ತೂಲ್ ಚಲಾಯಿಸುವ ತರಬೇತಿ ಖಾನಾಪುರ ತಾಲೂಕಿನ ಅರಣ್ಯ ಪ್ರದೇಶದಲ್ಲಿ ನೀಡಲಾಗಿತ್ತು ಎಂದು ಎಸ್ ಐಟಿ ತನಿಖೆ ವೇಳೆ ಬೆಳಕಿಗೆ ಬಂದಿತ್ತು. ಈಗ ಕಂಟ್ರಿಮೇಡ್ ಪಿಸ್ತೂಲ್ ಪತ್ತೆಯಾಗಿದ್ದರಿಂದ ಹಲವು ಅನುಮಾನ ಮೂಡಿಸಿದೆ.ಕಂಟ್ರಿಮೇಡ್ ಪಿಸ್ತೂಲ್ ಪತ್ತೆಯಾದ ಹಿನ್ನೆಲೆಯಲ್ಲಿ ವಿವಿಧ ಆಯಾಮಗಳಲ್ಲಿ ತನಿಖೆ ಚುರುಕುಗೊಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 