ನಾಲ್ಕು ಕಂಟ್ರಿಮೇಡ್ ಪಿಸ್ತೂಲ್ ಪತ್ತೆ: ಚುರುಕುಗೊಂಡ ತನಿಖೆ
ಬೆಳಗಾವಿ, ಫೆ.12, ಕಸದ ರಾಶಿಯಲ್ಲಿ ನಾಲ್ಕು ಕಂಟ್ರಿಮೇಡ್ ಪಿಸ್ತೂಲ್ ಗಳು ಪತ್ತೆಯಾಗಿದ್ದು, ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೂ ಸಂಬಂಧವಿದೇಯಾ ? ಎಂಬುದರ ಕುರಿತುಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.ಬೆಳಗಾವಿ ತಾಲೂಕಿನ ವಾಘವಾಡೆ ಗ್ರಾಮದಲ್ಲಿ ಸ್ಥಳೀಯರು ಸ್ಥಳ ಸ್ವಚ್ಛಗೊಳಿಸುವ ವೇಳೆಯಲ್ಲಿ ನಾಲ್ಕು ಕಂಟ್ರಿಮೇಡ್ ಪಿಸ್ತೂಲ್ ಪತ್ತೆಯಾಗಿವೆ.ಮಣ್ಣಿನಲ್ಲಿ ಹೂತಿಟ್ಟದ್ದರಿಂದ ಪಿಸ್ತೂಲ್ ಗಳು ತುಕ್ಕು ಹಿಡಿದಿವೆ. ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಆರೋಪಿಗಳಿಗೆ ಪಿಸ್ತೂಲ್ ಚಲಾಯಿಸುವ ತರಬೇತಿ ಖಾನಾಪುರ ತಾಲೂಕಿನ ಅರಣ್ಯ ಪ್ರದೇಶದಲ್ಲಿ ನೀಡಲಾಗಿತ್ತು ಎಂದು ಎಸ್ ಐಟಿ ತನಿಖೆ ವೇಳೆ ಬೆಳಕಿಗೆ ಬಂದಿತ್ತು. ಈಗ ಕಂಟ್ರಿಮೇಡ್ ಪಿಸ್ತೂಲ್ ಪತ್ತೆಯಾಗಿದ್ದರಿಂದ ಹಲವು ಅನುಮಾನ ಮೂಡಿಸಿದೆ.ಕಂಟ್ರಿಮೇಡ್ ಪಿಸ್ತೂಲ್ ಪತ್ತೆಯಾದ ಹಿನ್ನೆಲೆಯಲ್ಲಿ ವಿವಿಧ ಆಯಾಮಗಳಲ್ಲಿ ತನಿಖೆ ಚುರುಕುಗೊಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 