ಕೆನಡಾ ಮೂಲದ ಕಂಪನಿಯಿಂದ ಉದ್ಯಮಿಗೆ ವಂಚನೆ
ಬೆಂಗಳೂರು, ಫೆ 3, ಕೆನಡಾ ಮೂಲದ ಕಂಪನಿಯಿಂದ ತಮಗೆ 42 ಲಕ್ಷ ರೂ ವಂಚನೆಯಾಗಿದೆ ಎಂದು ಆರೋಪಿಸಿ ಉದ್ಯಮಿಯೊಬ್ಬರು ಸಿಐಡಿ ಸೈಬರ್ ಕ್ರೈಂ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಬೆಂಗಳೂರಿನ ಉದ್ಯಮಿ ಮಲ್ಲೇಶ್ ಲಿಂಗಾಚಾರ್ ಎಂಬುವವರು ಐವರ ವಿರುದ್ಧ ದೂರು ನೀಡಿದ್ದಾರೆ. ಕೆನಡಾ ಮೂಲದ ಕಂಪನಿ ಮುಖ್ಯಸ್ಥ ಅಲೆಕ್ಸ್ ವುಲ್ಫ್, ಜೇಮ್ಸ್ ಗೋಲ್ಡ್ ಬನ್ ಹಾಗೂ ಭಾರತ ಮೂಲದ ಕವಿತಾ ಠಾಕೂರ್, ಪದ್ಮನಾಭನ್, ಕರುಣಾ ಐವರು ತಮಗೆ ವಂಚನೆ ಮಾಡಿದ್ದಾರೆ ಎಂದು ಮಲ್ಲೇಶ್ ಅವರು ಆರೋಪಿಸಿದ್ದಾರೆ. ಕೆನಡಾದ ಕ್ಯಾನ್ಸರ್ ಸಂಶೋಧನಾ ಕೇಂದ್ರವೊಂದಕ್ಕೆ ಕಚ್ಚಾ ವಸ್ತುಗಳನ್ನು ಪೂರೈಕೆ ಮಾಡುತ್ತಿದ್ದೆ. ಆದರೆ, ಹಣ ಪಾವತಿ ಸಂದರ್ಭದಲ್ಲಿ ತಮಗೆ 42 ಲಕ್ಷ ರೂ ವಂಚಿಸಲಾಗಿದೆ ಎಂದು ಮಲ್ಲೇಶ್ ಅವರು ದೂರಿದ್ದಾರೆ. ಸದ್ಯ ಪೊಲೀಸರು ಉದ್ಯಮಿ ಮಲ್ಲೇಶ್ ಅವರ ದೂರು ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 