ಪ್ರವಾಸೋದ್ಯಮ, ಕ್ರೀಡಾ ಚಟುವಟಿಕೆಗಳಿಗೆ ಮುಕ್ತ ಅವಕಾಶ: ಸಿ.ಟಿ ರವಿ
ಬೆಂಗಳೂರು, ಮೇ 13, ಮೂರನೆ ಹಂತದ ಲಾಕ್ಡೌನ್ ಮುಗಿಯುತ್ತಿದ್ದಂತೆ ರಾಜ್ಯದಲ್ಲಿ ಕ್ರೀಡಾ ಇಲಾಖೆಯಡಿ ಬರುವ ಫಿಟ್ನೆಸ್ ಸೆಂಟರ್ ಗಳು, ಜಿಮ್ ಗಳು ಮತ್ತು ಗಾಲ್ಫ್ ಕ್ಲಬ್ ಚಟುವಟಿಕೆಗಳಿಗೆ ಅವಕಾಶಮಾಡಿ ಕೊಡುವುದಾಗಿ ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಹೇಳಿದ್ದಾರೆ. ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಭೇಟಿ ಮಾಡಿ ಮನವಿ ಸಲ್ಲಿಸಿದ ಬಳಿಕ ಸುದ್ದಿಗಾರರಿಗೆ ಅವರು ಈ ವಿಷಯ ತಿಳಿಸಿದರು. ಇದೆ 18 ರನಂತರ ರಾಜ್ಯದಲ್ಲಿ ಕ್ರೀಡಾ ಇಲಾಖೆಯಡಿ ಬರುವ ಫಿಟ್ನೆಸ್ ಸೆಂಟರ್ ಗಳು, ಜಿಮ್ ಗಳನ್ನ ತೆರೆಯುವಂತೆ ಮಾಡುವಂತೆ ಮನವಿ ಮಾಡಿದ್ದು ಇದಕ್ಕೆ ಸಕಾರಾತ್ಮ ಪ್ರತಿಕ್ರಿಯೆ ದೊರಕಿದೆ ಎಂದು ಹೇಳಿದರು.
ಲವ್ ಯುವರ್ ನೆಟೀವ್ ಎಂಬ ಹೊಸ ಚಿಂತನೆಯೊಂದಿಗೆ ಜಿಲ್ಲಾ, ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದಲ್ಲಿ ಪ್ರವಾಸೋದ್ಯಮ ಚಟುವಟಿಕೆಗಳಿಗೆ ಅವಕಾಶ ಮಾಡಿಕೊಡಲಾಗುವುದು ಎಂದರು. ಹೊಟೇಲ್ ಗಳನ್ನು ತೆರೆಯಲು ಅವಕಾಶ ಕೇಳಿದ್ದು ಸಾಮಾಜಿಕ ಅಂತರ ಕಾಯ್ದುಕೊಂಡು ಈ ಹೊಟೇಲ್ ಗಳು ಸೇವೆ ಆರಂಭಿಸಲು ಮನವಿ ಮಾಡಿಡಲಾಗಿದೆ 17 ರ ನಂತರ ಪರಿಶೀಲಿಸಿ ಕ್ರಮ ಕೈಗೊಳ್ಳುವುದಾಗಿ ಸಿಎಂ ಭರವಸೆ ಕೊಟ್ಟಿದ್ದಾರೆ ಎಂದೂ ಸಚಿವರು ಹೇಳಿದರು.
ಕರೋನ ಸಂಕಷ್ಟ ಸಮಯದಲ್ಲಿ ಪ್ರಧಾನ ಮಂತ್ರಿಗಳು ದೇಶದಲ್ಲೇ ದೊಡ್ಡ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ ಅದರ ಉಪಯೋಗವನ್ನು ರಾಜ್ಯವೂ ಪಡೆದುಕೊಳ್ಳಲಿದೆ ಎಂದರು.
ಪ್ರತಿಪಕ್ಷಗಳು ಈಗಲೂ ಟೀಕೆ ಮಾಡಿದರೆ ಅದು ರಾಜಕೀಯ ಎಂಬುದು ಸಾಭೀತಾಗಲಿದೆ ಎಂದು ಪರೋಕ್ಷವಾಗಿ ತಿರುಗೇಟು ನೀಡಿದರು.ಲವ್ ಯುವರ್ ನೆಟೀವ್ ಎಂಬ ಹೊಸ ಚಿಂತನೆಯೊಂದಿಗೆ ಜಿಲ್ಲಾ, ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದಲ್ಲಿ ಪ್ರವಾಸೋದ್ಯಮ ಚಟುವಟಿಕೆಗಳಿಗೆ ಅವಕಾಶ ಮಾಡಿಕೊಡಲಾಗುವುದು ಎಂದರು. 15 ನೇ ಹಣಕಾಸು ಯೋಜನೆಯಡಿ ಕೆಲವು ರಾಜ್ಯಗಳಿಗೆ ಅನುದಾನ ನೀಡಿದ ವಿಚಾರದಲ್ಲಿ ಪ್ರತಿಪಕ್ಷಗಳ ಟೀಕೆಗೆ ಸಚಿವರು ಉತ್ತರಿಸಿ, ಸಂಕಷ್ಟ ಹೆಚ್ಚು ಇರುವ ರಾಜ್ಯಗಳಿಗೆ ಅನುದಾನ ಕೊಡಲಾಗಿದೆ ಮಹಾರಾಷ್ಟ್ರ, ಪಶ್ಚಿಮ ಬಂಗಾಳ ರಾಜ್ಯಗಳಲ್ಲಿ ಕೊರೋನಾದಿಂದ ಹೆಚ್ಚು ಸಮಸ್ಯೆ ಆಗಿದೆ ಇದರಲ್ಲಿ ರಾಜಕೀಯ ಬೆರೆಸುವುದು ಸರಿಯಲ್ಲ, ಶೋಬೆಯೂ ಅಲ್ಲ ಎಂದು ಕೇಂದ್ರದ ತೀರ್ಮಾನವನ್ನು ಸಚಿವರು ಬಲವಾಗಿ ಸಮರ್ಥನೆ ಮಾಡಿಕೊಂಡರು.
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ 