ದಿ. 20ರಂದು ಉಚಿತ ಗುದಗತ ರೋಗಗಳ ತಪಾಸಣೆ ಶಿಬಿರ
Free disease screening camp on the 20th
ಚಿಕ್ಕೋಡಿ 18: ಕೆ.ಎಲ್.ಇ ಸಂಸ್ಥೆಯ ಆಯುರ್ವೇದ ಆಸ್ಪತ್ರೆ, ಬಸವ ಸರ್ಕಲ್ ಚಿಕ್ಕೋಡಿ ಇವರ ವತಿಯಿಂದ ಗುದಗತ ರೋಗಗಳ ಉಚಿತ ತಪಾಸಣೆ ಶಿಬಿರವನ್ನು ದಿ. 20-07-2025 ರಂದು ಮುಂಜಾನೆ 09:00 ರಿಂದ ಸಂಜೆ 5:00ರವರೆಗೆ ಏರಿ್ಡಸಲಾಗಿದೆ.
ಈ ಶಿಬಿರದಲ್ಲಿ ಮೂಲವ್ಯಾಧಿ (ಪೈಲ್ಸ್), ಭಗಂದರ (ಫಿಸ್ತುಲಾ), ಫಿಶರ, ಕುರು, ಪೈಲೋನೈಡಲ್ ಸೈನಸ್ (ನಾಡಿ ವೃಣ), ಗುದನಾಳದ ಸರಿಕೆ (ಹಿಗ್ಗುವಿಕೆ), ಗುದದ್ವಾರದ ಗಡ್ಡೆಗಳು, ಮಲಬದ್ಧತೆ, ಮಲ ವಿಸರ್ಜನೆ ಸಮಯದಲ್ಲಿ ರಕ್ತಸ್ರಾವ, ಉರಿ, ನೋವು ಸಮಸ್ಯೆಗಳಿಗೆ ಆಯುರ್ವೇದ ವೈದ್ಯರಿಂದ ಉಚಿತ ತಪಾಸಣೆ ಮಾಡಲಾಗುವುದು. ವಿಶಿಷ್ಟ ಆಯುರ್ವೇದ ಚಿಕಿತ್ಸೆಗಳಾದ ಕ್ಷಾರಕರ್ಮ, ಕ್ಷಾರಸೂತ್ರ, ಶಸ್ತ್ರಚಿಕಿತ್ಸೆ ಮತ್ತು ಓಷಧಿಗಳಿಂದ ರಿಯಾಯತಿ ದರದಲ್ಲಿ ಚಿಕಿತ್ಸೆ ಮಾಡಲಾಗುವುದು. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ ಡಾ.ಕಿರಣ ಮುತ್ನಾಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಅಧಿಕ ಮಾಹಿತಿಗಾಗಿ ಸಂಪರ್ಕಿಸಿ 08338275100.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 