ಉಚಿತ ಕಣ್ಣಿನ ತಪಾಸಣೆ ಶಿಬಿರ, ಶಸ್ತ್ರ ಚಿಕಿತ್ಸೆ ಕಾರ್ಯಕ್ರಮ
Free eye checkup camp, surgery program
ಲೋಕದರ್ಶನ ವರದಿ
ಯರಗಟ್ಟಿ, 30 : ಕಣ್ಣು ಮನುಷ್ಯನ ಪ್ರಮುಖ ಅಂಗವಾಗಿದ್ದು ಇದನ್ನು ಪ್ರತಿಯೊಬ್ಬರು ಸಂರಕ್ಷಣೆ ಮಾಡಿಕೊಳ್ಳುವುದು ಅಗತ್ಯವಾಗಿದೆ ಎಂದು ಕರ್ನಾಟಕ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಮುರಗೇಶ ಶಿವಪೂಜಿ ಹೇಳಿದರು.
ಸಮೀಪದ ತಲ್ಲೂರ ಗ್ರಾಮದ ಸರಕಾರಿ ಮಾದರಿ ಪ್ರಾಥಮಿಕ ಕನ್ನಡ ಶಾಲೆಯಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಕರ್ನಾಟಕ ಪತ್ರಕರ್ತರ ಸಂಘ, ತಾಲೂಕ ಘಟಕ ಯರಗಟ್ಟಿ ಮತ್ತು ಗ್ರಾಮ ಪಂಚಾಯತ, ಜನಪ್ರೀಯ ಕಣ್ಣಿನ ಆಸ್ಪತ್ರೆ ಹುಬ್ಬಳ್ಳಿ ಇವರ ಆಶ್ರಯದಲ್ಲಿ ಉಚಿತ ಕಣ್ಣಿನ ತಪಾಸಣೆ ಶಿಬಿರ ಹಾಗೂ ಶಸ್ತ್ರ ಚಿಕಿತ್ಸೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕಣ್ಣಿನ ತೊಂದರೆಯಾದಾಗ ಕೂಡಲೇ ತಜ್ಞ ವೈದ್ಯರಲ್ಲಿ ತೋರಿಸಿ ಚಿಕಿತ್ಸೆ ಪಡೆದುಕೊಳ್ಳಬೇಕು ಎಂದರು. ನಿವೃತ್ತ ಮುಖ್ಯ ಶಿಕ್ಷಕ ಎ.ವಿ.ಇಂಗಳೆ, ಹಿರಿಯ ನೇತ್ರ ಸಹಾಯುಕ ಪಾಂಡು ತಳವಾರ ಮಾತನಾಡಿ, ಪ್ರತಿಯೊಬ್ಬರೂ ಕಣ್ಣಿನ ಆರೈಕೆ ಮಾಡಿಕೊಳ್ಳಿ ಎಂದು ಹೇಳಿದರು.
ತೊರಗಲ್ಲ ಮಠದ ದೀಪಕ್ ಸ್ವಾಮಿ ಸಾನ್ನಿದ್ಯ ವಹಿಸಿದ್ದರು, ಎಸ್ಡಿಎಮ್ಸಿ ಅಧ್ಯಕ್ಷ ಶ್ಯಾಮ ಚಿಕಾಕಿ ಅದ್ಯಕ್ಷತೆ ವಹಿಸಿದ್ದರು, ಗ್ರಾಪಂ ಮಾಜಿ ಉಪಾಧ್ಯಕ್ಷ ಬಾಬುಗೌಡ ಅಣ್ಣಿಗೇರಿ, ಪತ್ರಕರ್ತರ ಸಂಘದ ತಾಲೂಕ ಅಧ್ಯಕ್ಷ ಈರಣ್ಣ ಹೂಲ್ಲೂರ, ಮಾಜಿ ಸೈನಿಕರ ಸಂಘದ ಅಧ್ಯಕ್ಷ ಬಸಪ್ಪ ಅಂಗಡಿ, ಮಹಿಳಾ ಸಂಜೀವಿನಿ ವಕ್ಕೂಟ ಅಧ್ಯಕ್ಷೆ ಕಸ್ತೂರಿ ಹೊಸುರ, ಮುಖಂಡ ಶಂಕರಗೌಡ ಪಾಟೀಲ, ಗ್ರಾಪಂ ಮಾಜಿ ಸದಸ್ಯ ಬಸವರಾಜ ಪೂಜೇರ, ನಿವೃತ್ತ ಶಿಕ್ಷಕ ಬಸಪ್ಪ ಲಕ್ಕನ್ನವರ ಇತರರಿದ್ದರು. ಶಿಕ್ಷಕ ಬಸನಗೌಡ ಅಣ್ಣಿಗೇರಿ ಸ್ವಾಗತಿಸಿ ವಂದಿಸಿದರು.
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ
ಬಿಗಿ ಭದ್ರತೆಯ ನಡುವೆ 6,200ಕ್ಕೂ ಹೆಚ್ಚು ಅಮರನಾಥ ಯಾತ್ರಿಕರು ಜಮ್ಮುವಿನಿಂದ ಪ್ರಯಾಣ ಬೆಳೆಸಿದರು 