ಹಣ್ಣಿನ ವ್ಯಾಪಾರಿ ಕೊರೊನಾ ಸೋಂಕಿನಿಂದ ಗುಣ ಆಸ್ಪತ್ರೆಯಿಂದ ಡಿಸ್ಚಾಜ್೯
ಹಾವೇರಿ: ಮೇ 27 :ಕೊರೊನಾ ಸೋಂಕಿನಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶಿಗ್ಗಾಂವ ತಾಲೂಕು ಅಂದಲಗಿ ಗ್ರಾಮದ ಮಾವಿನ ಹಣ್ಣಿನ ವ್ಯಾಪಾರಿ ಸೋಂಕಿನಿಂದ ಗುಣಹೊಂದಿ ಬುಧವಾರ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದನು.
ಜಿಲ್ಲೆಯಲ್ಲಿ ಈವರೆಗೆ ಆರು ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಈ ಪೈಕಿ ಮೂರು ಜನರು ಗುಣಮುಖರಾಗಿದ್ದಾರೆ. ಬಾಕಿ ಮೂರು ಜನರಿಗೆ ಚಿಕಿತ್ಸೆ ಮುಂದುವರೆದಿದೆ.
ಇಂದು ಬಿಡುಗಡೆಯಾದ ಕ-853 ವ್ಯಕ್ತಿಯು ಲಾರಿಯಲ್ಲಿ ಮಾವಿನಹಣ್ಣನ್ನು ತುಂಬಿಕೊಂಡು ಮುಂಬೈ ಮಾರುಕಟ್ಟೆಗೆ ಹೊಗಿ ಬಂದ ಪ್ರವಾಸದ ಹಿನ್ನೆಲೆ ಹೊಂದಿದ್ದು, ತಪಾಸಣೆ ಸಂದರ್ಭದಲ್ಲಿ ಕೋವಿಡ್ ಸೋಂಕು ದೃಢಪಟ್ಟಿತ್ತು (ಮೇ 11 ರಂದು). 14 ದಿನಗಳ ಕಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಈತನ ಅಂತಿಮ ವರದಿ ನೆಗಟಿವ್ ಬಂದ ಹಿನ್ನೆಲೆಯಲ್ಲಿ ಬುಧವಾರ ಬಿಡುಗಡೆಗೊಳಿಸಲಾಯಿತು.
ಸೋಂಕಿನಿಂದ ಗುಣಮುಖನಾದ ಈತನಿಗೆ ಆಸ್ಪತ್ರೆಯ ವೈದ್ಯರು ಹಾಗೂ ಅರೆ ವೈದ್ಯಕೀಯ ಸಿಬ್ಬಂದಿ ಗುಲಾಬಿ ಹೂ ನೀಡಿ ಚಪ್ಪಾಳೆ ಮೂಲಕ ಶುಭ ಹಾರೈಸಿ ಮನೆಗೆ ಕಳುಹಿಸಿದರು. ನಿಯಮದಂತೆ ಮುಂದಿನ 14 ದಿವಸ ಗೃಹ ಪ್ರತ್ಯೇಕತೆಯಲ್ಲಿ ನಿಗಾವಹಿಸಲು ಸ್ಥಳೀಯ ವೈದ್ಯಕೀಯ ಸಿಬ್ಬಂದಿಗಳು ಕ್ರಮವಹಿಸಲಿದ್ದಾರೆ.
ಕೋವಿಡ್ ಆಸ್ಪತ್ರೆಯ ನೋಡಲ್ ಅಧಿಕಾರಿ ಡಾ.ವಿಶ್ವನಾಥ ಸಾಲಿಮಠ ಅವರು ಮಾಧ್ಯಮದವರಿಗೆ ಈ ಕುರಿತಂತೆ ಮಾಹಿತಿ ನೀಡಿ, ಜಿಲ್ಲೆಯಲ್ಲಿ ಕೋವಿಡ್ ಸೋಂಕಿನ ಕಾರಣ ಆಸ್ಪತ್ರೆಗೆ ದಾಖಲಾಗಿದ್ದ ಆರು ಜನರ ಪೈಕಿ ಮೂವರು ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಇದು ಸಂತಸ ತಂದಿದೆ, ಶೀಘ್ರದಲ್ಲಿಯೇ ಇನ್ನುಳಿದ ಮೂರು ಜನ ಗುಣಮುಖರಾಗುವ ಲಕ್ಷಣಗಳಿವೆ. ಇತ್ತೀಚಿನ ಕೋವಿಡ್ ಸೋಂಕಿತರಿಗೆ ರೋಗದ ಲಕ್ಷಣಗಳು ಕಾಣುತ್ತಿಲ್ಲ ಎಂದು ತಿಳಿಸಿದರು.
ಆರ್.ಎಂ.ಓ ಡಾ. ಸುರೇಶ ಪೂಜಾರ ಅವರು ಮಾತನಾಡಿ, ಕೋವಿಡ್ ರೋಗ ಹರಡದಂತೆ ಪ್ರತಿಯೊಬ್ಬರು ಮುಂಜಾಗ್ರಾತ ಕ್ರಮಗಳನ್ನು ಕೈಗೊಳ್ಳಬೇಕು ಹಾಗೂ ಸಕರ್ಾರದ ಮಾರ್ಗಸೂಚಿಗಳನ್ನು ಎಲ್ಲರು ಪಾಲಿಸಬೇಕು. ಕೋವಿಡ್ ಸೋಂಕು ಹರಡದಂತೆ ತಡೆಗಟ್ಟುವುದು ಎಲ್ಲರ ಸಾಮಾಜಿಕ ಜವಾಬ್ದಾರಿಯಾಗಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಪ್ರಭಾರ ಶೂಶ್ರುಷಾಧಿಕಾರಿ ಶ್ರೀಮತಿ ರಾಜೇಶ್ವರಿ ಭಟ್, ದಾದಿಯರು ಆಸ್ಪತ್ರೆ ಸಿಬ್ಬಂದಿ ಮತ್ತಿತರರು ಹಾಜರಿದ್ದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 