ಕಾರ್ಮಿಕರಿಗೆ ಪೂರ್ಣ ವೇತನ: ಇಂದು ಸುಪ್ರೀಂಕೋರ್ಟ್ ತೀರ್ಪು
ನವದೆಹಲಿ, ಜೂನ್ 12, ಕೊರೊನಾ ಸೋಂಕು, ದೇಶಾದ್ಯಂತ ಲಾಕ್ಡೌನ್ ಅವಧಿಯಲ್ಲಿ ಕಾರ್ಮಿಕರಿಗೆ ಪೂರ್ಣ ವೇತನ ಪಾವತಿಸಬೇಕು ಎಂಬ ಕೇಂದ್ರದ ಆದೇಶ ಪ್ರಶ್ನಿಸಿದ್ದ ಮನವಿಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಇಂದು ತೀರ್ಪು ಪ್ರಕಟಿಸಲಿದೆ.ಕೊರೊನಾ ಸೋಂಕು ಹರಡುವ ಭೀತಿಯಲ್ಲಿ ಕಳದೆ ಮಾರ್ಚ್ ತಿಂಗಳಲ್ಲಿ ದೇಶಾದ್ಯಂತ ಲಾಕ್ಡೌನ್ ಜಾರಿ ಮಾಡಲಾಗಿತ್ತು ಅಲ್ಲಿಂದ ಸುಮಾರು 54ಕ್ಕೂ ಅಧಿಕ ದಿನಗಳವರೆಗೂ ಅಗತ್ಯ ಸೇವೆ ಹೊರತುಪಡಿಸಿದರೆ ಬೇರೆ ಯಾವುದೆ ಚಟುವಟಿಕೆಯೂ ನಡೆದಿರಲಿಲ್ಲ .ಈ ವೇಳೆ ಲಾಕ್ಡೌನ್ ಅವಧಿಯಲ್ಲೂ ಕಾರ್ಮಿಕರಿಗೆ ಕಂಪನಿಗಳು ಪೂರ್ತಿ ಸಂಬಳ ನೀಡಬೇಕು ಎಂದು ಗೃಹ ಸಚಿವಾಲಯ ಅಧಿಸೂಚನೆ ಹೊರಡಿಸಿತ್ತು. ಕೇಂದ್ರದ ಆದೇಶ ಪ್ರಶ್ನಿಸಿ, ಖಾಸಗಿ ಕಂಪನಿಗಳು ಕಾನೂನು ಹೋರಾಟಕ್ಕಾಗಿ ಸುಪ್ರೀಂಕೋರ್ಟ್ಗೆ ಮೆಟ್ಟಲೇರಿದ್ದವು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 