ಹಳ್ಳಿ ಹಳ್ಳಿಗೆ ಭೇಟಿ ನೀಡುತ್ತಿರುವ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ
ಕಾರವಾರ,೧೬: ಉತ್ತರ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯ ನಿರ್ವಹಣಾಧಿಕಾರಿ ಮೊಹಮ್ಮದ್ ರೋಶನ್ ಅವರು ಜಿಲ್ಲೆಯ ಎಲ್ಲಾ ತಾಲೂಕುಗಳ ಹಳ್ಳಿಗಳಿಗೆ ಭೇಟಿ ನೀಡಿ ಕುಡಿಯುವ ನೀರಿನ ಅಭಾವ ಮತ್ತು ಜಿ.ಪಂ. , ಜಿಲ್ಲಾಡಳಿತ ನೀಡುತ್ತಿರುವ ನೀರಿನ ಸೌಲಭ್ಯವನ್ನು ಪರಿಶೀಲಿಸುತ್ತಿದ್ದಾರೆ. ಅವಶ್ಯವಿದ್ದಡೆ ಬೋರ್ ವೆಲ್ ಸಹ ಹಾಕಲಾಗುತ್ತಿದೆ. ಗುರುವಾರ ಅವರು ಹಳಿಯಾಳ ತಾಲೂಕಿನ ಹತ್ತಾರು ಹಳ್ಳಿಗಳಿಗೆ ಅಧಿಕಾರಿಗಳ ತಂಡದ ಜೊತೆ ಭೇಟಿ ನೀಡಿ, ಜನರ ಜೊತೆ ನೇರವಾಗಿ ಮಾತುಕತೆ ನಡೆಸಿದರು. ಹಳಿಯಾಳದ ಮುರ್ಕವಾಡ, ಭಗವತಿ, ಕೆ.ಕೆ.ಹಳ್ಳಿ ಗಳಿಗೆ ಭೇಟಿ ನೀಡಿ ಜನರ ಜೊತೆ ಮಾತನಾಡಿದರು. ಬಿ.ಕೆ.ಹಳ್ಳಿಗೆ ಸಹ ಭೇಟಿ ನೀಡಿದರು. ಟಾಸ್ಕಪೋರ್ಸ ನಡಿ ಕೈಗೊಂಡ ಕಾಮಗಾರಿ ಅಥವಾ ಪಯರ್ಾಯ ನೀರಿನ ವ್ಯವಸ್ಥೆಯ ಬಿಲ್ ಗಳನ್ನು ತಕ್ಷಣ ಜಿಲ್ಲಾ ಪಂಚಾಯತ್ ಕಚೇರಿಗೆ ಕಳುಹಿಸಲು ಸೂಚಿಸಿದರು. ಜನರಿಗೆ ಕುಡಿಯುವ ನೀರನ್ನು ತೊಂದರೆಯಾಗದಂತೆ, ನಿಯತವಾಗಿ ಪೂರೈಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ತಾ.ಪಂ. ಕಾರ್ಯನಿವರ್ಾಹಕ ಅಧಿಕಾರಿ ಮಹೇಶ್ ಕುರಿಯವರ, ಎ.ಸಿ.ಹಳೆಮನಿ, ಸಹಾಯಕ ಎಂಜಿನಿಯರ್ಗಳು, ಸಿಬ್ಬಂದಿ ಉಪಸ್ಥಿತರಿದ್ದರು.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 