ಕಲಿಕಾ ಪ್ರವಾಸಕ್ಕೆ ಜಿ.ಪಂ ಸಿಇಓ ಮಾನಕರ ಚಾಲನೆ
ಲೋಕದರ್ಶನ ವರದಿ
ಬಾಗಲಕೋಟೆ, 12: ಸ್ವಚ್ಛ ಭಾರತ ಮಿಷನ್ (ಗ್ರಾಮೀಣ) ಯೋಜನೆಯಡಿ ಹಮ್ಮಿಕೊಂಡ ಕಲಿಕಾ ಪ್ರವಾಸಕ್ಕೆ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿವರ್ಾಹಕ ಅಧಿಕಾರಿಗಳಾದ ಗಂಗೂಬಾಯಿ ಮಾನಕರ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.
ಜಿಲ್ಲಾಡಳಿತ ಭವನದ ಮುಖ್ಯ ದ್ವಾರದಲ್ಲಿ ಇತ್ತೀಚೆಗೆ ಚಾಲನೆ ನೀಡಿ ಮಾತನಾಡಿದ ಅವರು ಸ್ವಚ್ಛ ಭಾರತ ಮಿಷನ್ ಕಾರ್ಯಕ್ರಮದಡಿ ಈಗಾಗಲೇ ಬಯಲು ಬಹಿದರ್ೆಸೆ ಮುಕ್ತ ಜಿಲ್ಲೆ ಎಂದು ಘೋಷಿಸಲಾಗಿದ್ದು, ಪ್ರಸ್ತುತ ಎರಡನೇ ಹಂತವಾಗಿ ಓಡಿಎಫ್ ಪ್ಲಸ್ ಕಾರ್ಯಕ್ರಮ ಚಟುವಟಿಕೆಯಡಿ ಸ್ವಚ್ಛ ಸುಂದರ ಜಿಲ್ಲೆಯನ್ನಾಗಿಸಲು ಘನ ಮತ್ತು ದ್ರವ ತ್ಯಾಜ್ಯ ನಿರ್ವಹಣೆ ಹಾಗೂ ಶೌಚಾಲಯ ಸುಸ್ಥಿರ ಬಳಕೆ ಪೂರಕವಾಗಿ ಗ್ರಾಮ ಪಂಚಾಯತಿ ಪ್ರತಿನಿಧಿಗಳು, ಅಭಿವೃದ್ದಿ ಅಧಿಕಾರಿಗಳು, ತಾಲೂಕ ಮಟ್ಟದ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಸೇರಿ ಒಟ್ಟು 50 ಜನರಿಗೆ ಒಂದು ದಿನದ ಉಡುಪಿ ಜಿಲ್ಲಾ ಕಲಿಕಾ ಪ್ರವಾಸ ಹಮ್ಮಿಕೊಳ್ಳಲಾಗಿದೆ ಎಂದರು.
ಈಗಾಗಲೇ ಉತ್ತಮ ರೀತಿಯಲ್ಲಿ ಶೌಚಾಲಯಗಳ ಸುಸ್ಥಿರ ಬಳಕೆ ಹಾಗೂ ಘನ ಮತ್ತು ದ್ರವ ತ್ಯಾಜ್ಯ ನಿರ್ವಹಣೆ ಮಾಡಿದ ಉಡುಪಿ ಜಿಲ್ಲೆ ಅಧ್ಯಯನ ಪ್ರವಾಸವು ಈ ಜಿಲ್ಲೆಯಲ್ಲಿ ಯೋಜನೆ ಪರಿಣಾಮಕಾರಿಯಾಗಿ ಅನುಷ್ಠಾನ ಕೈಗೊಳ್ಳಲು ಹಾಗೂ ಸ್ವಚ್ಛ ಸುಂದರ ಜಿಲ್ಲೆಯನ್ನಾಗಿಸಲು ಸಹಕಾರವಾಗುವುದೆಂದು ಜಿ.ಪಂ ಸಿಇಓ ಮಾನಕರ ಹೇಳಿದರು. ಇದೇ ಸಂದರ್ಭದಲ್ಲಿ ಜಿ.ಪಂ ಯೋಜನಾ ನಿದರ್ೇಶಕ ವಿ.ಎಸ್.ಹಿರೇಮಠ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 