ಗಣೇಶ ಚತುರ್ಥಿ : ಹಾಸ್ಯ ಸಂಗೀತ ಸಂಜೆ ಕಾರ್ಯಕ್ರಮ
Ganesh Chaturthi: Comedy and musical evening program
ಯರಗಟ್ಟಿ 07: ಸಮೀಪದ ಸತ್ತಿಗೇರಿ ಗ್ರಾಮದಲ್ಲಿ ವೀರಭದ್ರೇಶ್ವರ ಗಜಾನನ ಮಂಡಳಿ ಹಾಗೂ ಯುವ ಶಕ್ತಿ ಯುವ ಸಂಘ ಇವರ ಸಂಯುಕ್ತಾಶ್ರಯದಲ್ಲಿ ಗಣೇಶ ಚತುರ್ಥಿ ಅಂಗವಾಗಿ ಅದ್ವಿಕಾ ಮೆಲೋಡಿಸ್ ಆರ್ಕಿಸ್ಟ್ರಾ ಇವರಿಂದ ಹಾಸ್ಯ ಸಂಗೀತ ಸಂಜೆ ಕಾರ್ಯಕ್ರಮ ಶನಿವಾರ ಜರುಗಿತು.
ಕಾರ್ಯಕ್ರಮವನ್ನು ಶಾಸಕ ವಿಶ್ವಾಸ ವೈದ್ಯ ರಿಬ್ಬನ್ ಕಟ್ಟ್ ಮಾಡುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು ಸಂಗೀತದಿಂದ ಮಾನಸಿಕ ಒತ್ತಡ ಕಡಿಮೆಯಾಗಿ ಮನಸ್ಸಿಗೆ ಶಾಂತಿ ನೆಮ್ಮದಿ ತಂದುಕೊಡುತ್ತದೆ. ಸಂಗೀತ ರೋಗವನ್ನು ನಿವಾರಿಸುವ ಶಕ್ತಿ ಹೊದಿದೆ ಎಂದು ಹೇಳಿದರು.ಸಂಗೀತ ಆಲಿಸುವುದರಿಂದ ಏಕಾಗ್ರತೆ ಮೂಡಿ ಮನಸ್ಸು ಪ್ರಪುಲ್ಲಗೊಳ್ಳುತ್ತದೆ ಮತ್ತು ಚೆ?ತನ್ಯ ಭರಿತವಾಗುತ್ತದೆ. ಸಂಗೀತದಲ್ಲಿ ಪ್ರತಿಯೊಬ್ಬರು ತಮ್ಮನ್ನು ತಾವು ತೊಡಗಿಸಿಕೊಳ್ಳುವುದಲ್ಲದೇ ಮಕ್ಕಳಿಗೂ ಸಂಗೀತದಲ್ಲಿ ಆಸಕ್ತಿ ಬರುವಂತೆ ಮಾಡಬೇಕಾಗಿದೆ ಎಂದರು.
ಈ ವೇಳೆ ಅಶ್ವತ ವೈದ್ಯ, ಪ್ರಕಾಶ ವಾಲಿ, ಶ್ರೀಶೈಲ ಸಂಗಪ್ಪನವರ, ಕೆಎಂಎಫ್ ನಿರ್ದೇಶಕ ಶಂಕರ ಇಟ್ನಾಳ, ಮಲಿಕಸಾಬ ಬಾಗವಾನ, ನೀಲಕಂಠ ಸಿದ್ದಬಸನ್ನವರ, ಗುತ್ತಿಗೆದಾರ ಮಾಂತೇಶ ಉರುಬಿನ, ಮಾಜಿ ಗ್ರಾ. ಪಂ. ಅಧ್ಯಕ್ಷ ಬಂಗಾರ್ಪ ಹರಳಿ, ಗುರ್ಪ ಶೆಟ್ಟರ, ಉಮೇಶ ಮಾಗುಂಡನವರ, ರಮೇಶ ಗೂಡಿ, ಗ್ರಾ. ಪಂ. ಉಪಾಧ್ಯಕ್ಷ ಗುರು ವಾಲಿ, ಸದಾಶಿವ ಚವಲಗಿ, ಚಂದ್ರು ಶಾಮನವರ, ಮಂಜು ಪಾಚಂಗಿ, ಚಂದ್ರ್ಪ ಯಡಳ್ಳಿ, ರಾಜು ಸೋಮಣ್ಣವರ, ರಾಜು ಪಟ್ಟಣಶೆಟ್ಟಿ, ಈರಣ್ಣ ರಾಯರ, ಪ್ರಕಾಶ್ ದಂಡಿನ, ಬಸಯ್ಯ ಸಾಲಿಮಠ, ಜಗದೀಶ್ ತೋಡ್ಕರ ಸೇರಿದಂತೆ ಅನೇಕರು ಇದ್ದರು07 ಯರಗಟ್ಟಿ 02ಪೋಟೋ ಶೇಷಿಕೆ ಹಾಸ್ಯ ಸಂಗೀತ ಸಂಜೆ ಕಾರ್ಯಕ್ರಮವನ್ನು ರಿಬ್ಬನ್ ಕಟ್ ಮಾಡುವ ಮೂಲಕ ಚಾಲನೆ ನೀಡಿದ ಶಾಸಕ ವಿಶ್ವಾಸ ವೈದ್ಯ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 