ಗಂಗಾವತಿ: ಮಕ್ಕಳಲ್ಲಿ ಪರಿಸರ ಜಾಗೃತಿ ಅವಶ್ಯ: ವಸ್ತ್ರದ
ಲೋಕದರ್ಶನ ವರದಿ
ಗಂಗಾವತಿ 05: ಪ್ರಾಥಮಿಕ ಶಾಲಾ ಹಂತದಲಿ ಮಕ್ಕಳಿಗೆ ಪರಸರ ಜಾಗೃತಿ ಮೂಡಿಸುವುದು ಪ್ರಸ್ತುತ ದಿನಮಾನಗಳಲ್ಲಿ ಅವಶ್ಯವಾಗಿದೆ ಎಂದು ಸೇಂಟ್ ಪಾಲ್ಸ್ ಮಹಿಳಾ ವಿದ್ಯಾ ಸಂಸ್ಥೆಯ ಕಾರ್ಯದಶರ್ಿ ಸವರ್ೇಶ ವಸ್ತ್ರದ ಹೇಳಿದರು.
ಅವರು ಸೇಂಟ್ ಪಾಲ್ಸ ಶಾಲೆಯ ಆವರಣದಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಹಮ್ಮಿಕೊಂಡಿದ್ದ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾಡಿದರು. ಪ್ರಸ್ತುತ ದಿನಗಳಲ್ಲಿ ವರ್ಷದಿಂದ ವರ್ಷಕ್ಕೆ ತಾಪಮಾನ ಏರಿಕೆಯಾಗುತಿದ್ದು, ಮಳೆಯ ಪ್ರಮಾಣ ಕಡಿಯಾಗುತ್ತಿದೆ. ಗಿಡಮರಗಳ ನಾಶ ಮತ್ತು ಅರಣ್ಯ ಪ್ರದೇಶದ ಪ್ರಮಾಣ ಕಡಿಮೆಯಾಗುತ್ತಿದೆ. ಇದರಿಂದ ಪ್ರತಿ ವರ್ಷದಿಂದ ವರ್ಷಕ್ಕೆ ಕುಡಿಯುವ ನೀರಿಗಾಗಿ ಹಾಹಾಕಾರ ಶುರುವಾಗುತ್ತಿದೆ. ಇವೆಲ್ಲಗಳಿಂದ ತಪ್ಪಿಸಿಕೊಳ್ಳಲು ಎಲ್ಲರೂ ಮನೆಗೊಂದು ಮರ ಬೆಳೆಸಲು ಮುಂದಾಗಬೇಕಿದೆ ಎಂದರು.
ಈ ವೇಳೆಯಲ್ಲಿ ಶಾಲಾ ಮಕ್ಕಳು 1918-2018ರವರೆಗೆ ಪರಸರ ಮತ್ತು ಮಳೆ ಬೆಳೆಯ ಕುರಿತು ಅಣಕು ಪ್ರದರ್ಶನ ಮಾಡುವ ಮೂಲಕ ಜಾಗೃತಿ ಮೂಡಿಸಿದರು. ಶಾಲಾ ಮಕ್ಕಳು ಮತ್ತು ಶಿಕ್ಷಕರು ಸಸಿ ನೆಡುವ ಮೂಲಕ ವಿಶ್ವ ಪರಿಸರವನ್ನು ಆಚರಣೆ ಮಾಡಿದರು.
ಈ ವೇಳೆಯಲ್ಲಿ ಸಂಸ್ಥೆಯ ಖಜಾಂಚಿ ಹುಸೇನ್ ಬಾದಷಹ, ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪದ್ಮಾವತಿ, ಸಹ ಮುಖ್ಯೋಪಾಧ್ಯಾಯಿನಿ ಸುಹಾನ್, ಸಹ ಶಿಕ್ಷಕಿ ಶರಣಮ್ಮ, ಸ್ವಾತಿ ರಾಯ್ಕರ್, ಅಶ್ವಿನಿ, ಶಿರಿನ್, ಕು. ಅಫ್ರೀನ್, ಭವ್ಯಲತಾ, ಸೌಭಾಗ್ಯ, ಕು. ಅಮಿತಾ ಸೇರಿದಂತೆ ಇನ್ನಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 