ವಿಶಾಖಪಟ್ಟಣಂನಲ್ಲಿ ಅನಿಲ ಸೋರಿಕೆ: ಇಬ್ಬರ ಸಾವು
ವಿಶಾಖಪಟ್ಟಣಂ, ಜೂ 30 ; ಆಂಧ್ರ ಪ್ರದೇಶದ ವಿಶಾಖಪಟ್ಟಣಂನಲ್ಲಿ ಮತ್ತೊಂದು ಅನಿಲ ದುರಂತ ಸಂಭವಿಸಿದ್ದು, ಇಬ್ಬರು ಮೃತಪಟ್ಟು,ನಾಲ್ವರು ಅಸ್ವಸ್ಥರಾಗಿದ್ದಾರೆ. ಇತ್ತೀಚೆಗೆ ಸಂಭವಿಸಿದ ಅನಿಲ ದುರಂತದಿಂದ ಜನತೆ ಇನ್ನೂ ಆತಂಕದಲ್ಲಿರುವಾಗಲೇ ಇಲ್ಲಿನ ಪರವಾಡ ಫಾರ್ಮಸಿಟಿ ಔಷಧ ಕಾರ್ಖಾನೆಯಲ್ಲಿ ಅನಿಲ ಸೋರಿಕೆಯಾಗಿದೆ. ವಿಶಾಖಪಟ್ಟಣದಲ್ಲಿ ಈ ಔಷಧ ಕಾರ್ಖಾನೆಯಿದ್ದು, ಈ ಅನಿಲ ದುರಂತದಲ್ಲಿ ನಾಲ್ಕು ಮಂದಿ ಅಸ್ವಸ್ಥರಾಗಿದ್ದಾರೆ. ಘಟನಾ ಸ್ಥಳಕ್ಕೆ ರಕ್ಷಣಾ ತಂಡಗಳು ಭೇಟಿ ನೀಡಿದ್ದು, ಪರಿಹಾರ ಕಾರ್ಯ ತೀವ್ರಗತಿಯಲ್ಲಿ ಸಾಗಿದೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ.
ಬೈಲಹೊಂಗಲದಲ್ಲಿ ಮಳೆಯ ಅರ್ಭಟ : ನದಿಯಂತಾದ ರಸ್ತೆಗಳು, ನೀರಿನ ಸೆಳೆತಕ್ಕೆ ಸಿಲುಕಿದ ದ್ವಿಚಕ್ರ ವಾಹನಗಳು
ಕನ್ನಡಪರ ನಿರ್ಣಯಕ್ಕೆ ಹಿಂದೇಟು : ಪಾಲಿಕೆಯಲ್ಲಿ ನಿರ್ಣಯ ಮಂಡಿಸಲು ಮುಂದಾದ ಶಾಸಕ ಸೇಠ್
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ 