ಮೇ.25ರೊಳಗೆ ಯುವನಿಧಿ ಸ್ವಯಂ ದೃಢೀಕರಣ ಮಾಡಿಕೊಳ್ಳಿ: ಅಶೋಕ ಮಂದಾಲಿ
Get Yuvanidhi self-certified by May 25: Ashok Mandali
ಗದಗ: ಯುವನಿಧಿ ಯೋಜನೆಯಲ್ಲಿ ಈಗಾಗಲೇ ನೋಂದಾಯಿಸಿಕೊಂಡು ಹಣ ಪಡೆಯುತ್ತಿರುವ ಅಭ್ಯರ್ಥಿಗಳಿಗೆ ವರ್ಷದಲ್ಲಿ 4 ಬಾರಿ ಸ್ವಯಂ ಘೋಷಣೆಯನ್ನು ನೀಡಬೇಕು. ಪ್ರತಿ ಮೂರು ತಿಂಗಳಿಗೊಮ್ಮೆ ದಿನಾಂಕ 25 ರೊಳಗಾಗಿ ಸ್ವಯಂ ಘೂಷಣೆಯನ್ನು ನೀಡಬೇಕು.
ಮಾರ್ಚ್-2025, ಎಪ್ರೀಲ್-2025, ಮೇ-2025 ಈ ಮೂರು ತಿಂಗಳ ಸ್ವಯಂ ಘೋಷಣೆಯನ್ನು ಮೇ-2025ರ ಮಾಹೆಯಲ್ಲಿ ಸ್ವಯಂ ಘೋಷಣೆಯನ್ನು ನೀಡಬೇಕು. ಈ ತ್ರೈಮಾಸಿಕದ ಸ್ವಯಂ ದೃಢೀಕರಣವನ್ನು ಸಲ್ಲಿಸಲು ಮೇ.25 ಕ್ಕೆ ಕೊನೆಗೊಳ್ಳುತ್ತಿದ್ದು, ಯುವನಿಧಿ ಯೋಜನೆಯ ಫಲಾನುಭವಿಗಳು ನಿಗದಿತ ದಿನಾಂಕದೊಳಗೆ ಸೇವಾ ಸಿಂಧು ಪೋರ್ಟಲ್ ಲಾಗಿನ್ನಲ್ಲಿ ಅರ್ಜಿ ಸ್ಥಿತಿಯನ್ನು ಪರೀಶೀಲಿಸಿ ದಾಖಲೆ ಪರೀಶೀಲನೆ ಬಾಕಿ ಉಳಿದಿರುವ ಅಭ್ಯರ್ಥಿಗಳು ಎಲ್ಲ ಮೂಲ ದಾಖಲೆಗಳೊಂದಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ 215 ಇಲ್ಲಿಗೆ ಖುದ್ದಾಗಿ ಸಂಪರ್ಕಿಸಿ ತಮ್ಮ ದಾಖಲೆಗಳನ್ನು ಪರೀಶೀಲಿಸಿ ದೃಢೀಕರಿಸಿಕೊಳ್ಳಲು ಸೂಚಿಸಿದೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆಃ 08372-220609. ಗೆ ಸಂಪರ್ಕಿಸಲು ಗದಗ ತಾಲ್ಲೂಕಾಮಟ್ಟದ ಪಂಚಗ್ಯಾರಂಟಿ ಯೋಜನೆಯ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಅಶೋಕ ಮಂದಾಲಿ ಅವರು ಪತ್ರಿಕಾ ಪ್ರಕಟಣೆ ಮೂಲಕ ವಿನಂತಿಸಿದ್ದಾರೆ.
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ 