ಇಂದಿನಿಂದ ಗೈಬಿಸಾಬ್ ದರ್ಗಾ ಉರುಸು
Ghaibisab Dargah Urs from today
ಲೋಕದರ್ಶನ ವರದಿ
ಬೀಳಗಿ 20: ತಾಲೂಕಿನ ಯಡಹಳ್ಳಿ (ಗಲಗಲಿ) ಹಜರತ್ ಪೀರ್ ಗೈಬಿಸಾಬ್ ದರ್ಗಾ ಹಿಂದೂ-ಮುಸ್ಲಿಂ ಭಾವೈಕ್ಯ ಕೇಂದ್ರವಾಗಿದ್ದು, ಮಾ.21 ರಂದು ಉರುಸು ನಡೆಯಲಿದೆ. ಈ ಬಾರಿಯೂ ಮೂರು ದಿನ ಉರುಸು ಅದ್ದೂರಿಯಾಗಿ ಜರುಗಲಿದ್ದು, ನಾನಾ ಕ್ರೀಡೆಗಳನ್ನು ಆಯೋಜಿಸಲಾಗಿದೆ. ಉರುಸು ದಿವಸ ಮಹರ್ಷಿ ವಾಲ್ಮೀಕಿ ನಾಟ್ಯ ಸಂಘದಿಂದ ಕಲಿಯುಗದಲ್ಲಿ ಘರ್ಜಿಸಿದ ಕರ್ಣಾರ್ಜುನ ಎಂದು ಸಾಮಾಜಿಕ ನಾಟಕ ನಡೆಯಲಿದೆ ಎಂದು ದರ್ಗಾ ಅಧ್ಯಕ್ಷ ಮೌಲಾಸಾಬ್ ಜಮಾದಾರ, ಕಾರ್ಯದರ್ಶಿ ಭಾಷಾಸಾಬ್ ಚಿಕ್ಕಗಲಗಲಿ ತಿಳಿಸಿದ್ದಾರೆ. ಹಿಂದೂ-ಮುಸ್ಲಿಂ ಸಮುದಾಯಕ್ಕೂ ಪವಿತ್ರ ಕ್ಷೇತ್ರವಾಗಿರುವ ಈ ದರ್ಗಾಕ್ಕೆ ಐತಿಹಾಸಿಕ ಹಿನ್ನೆಲೆಯಿದೆ. ದೇಸಾಯಿ ಮನೆತನದ ಗಲೀಫ್ ಹಾಗೂ ನೈವೇದ್ಯ ಆರ್ಿಸಿದ ಮೇಲೆಯೇ ಉರುಸು ಆರಂಭವಾಗುತ್ತದೆ. ಸುತ್ತಮುತ್ತಲಿನ ಜನತೆ ಜಾತಿ ಭೇದವಿಲ್ಲದೇ ಎಲ್ಲರೂ ಮನೆಗಳನ್ನು ಶೃಂಗರಿಸುವ ಮೂಲಕ ಉರುಸಿನಲ್ಲಿ ಭಕ್ತಿಯಿಂದ ಭಾಗವಹಿಸುತ್ತಾರೆ.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 