ವಸತಿ ಯೋಜನೆಯಲ್ಲಿ ಗೋಲ್ ಮಾಲ್: ವಿ. ಸೋಮಣ್ಣ
ಚಿಕ್ಕೋಡಿ, ನ 4: ಇಡೀ ರಾಜ್ಯದಲ್ಲಿಯೇ ವಸತಿ ಯೋಜನೆಗಳಲ್ಲಿ ಗೋಲ್ಮಾಲ್ ಆಗಿದೆ ಎಂದು ವಸತಿ ಸಚಿವ ವಿ ಸೋಮಣ್ಣ ಆರೋಪಿಸಿದ್ದಾರೆ.
ಚಿಕ್ಕೋಡಿ ತಾಲೂಕಿನ ಮಾಂಜರಿ ಗ್ರಾಮದಲ್ಲಿ, ವಿವಿಧ ವಸತಿ ಯೋಜನೆಗಳ ಹಣ ಬಿಡುಗಡೆ ಸ್ಥಗಿತ ವಿಚಾರ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಇಡೀ ರಾಜ್ಯದಲ್ಲಿ ವಸತಿ ಯೋಜನೆಯಲ್ಲಿ ಏಳು ವರ್ಷಗಳಲ್ಲಿ ಸಾಕಷ್ಟು ಗೋಲ್ ಮಾಲ್ ಆಗಿದೆ. ಬಡವರ ಮನೆಗಳನ್ನು ಬಹುತೇಕ ಜನ ಲಪಟಾಯಿಸಿದ್ದು, ನಿನ್ನೆಯಷ್ಟೇ ಈ ಬಗ್ಗೆ ಸಮಗ್ರ ತನಿಖೆಗೆ ಆದೇಶ ನೀಡಿದ್ದೇನೆ ಎಂದರು.
ಈ ಕುರಿತು ಈಗಾಗಲೇ ಅಧಿಕಾರಿಗಳಿಗೆ, ಶಾಸಕರಿಗೆ, ಸಂಸದರಿಗೆ ಪತ್ರ ಬರೆದಿದ್ದೇನೆ. ಒಂದು ಮನೆಗೆ 10 ರಿಂದ 15 ಬಾರಿ ಹಣ ಪಡೆದಿರುವದು ಬೆಳಕಿಗೆ ಬಂದಿದೆ ಎಂದು ಅವರು ಮಾಹಿತಿ ನೀಡಿದರು.
ಒಂದು ವಾರದಲ್ಲಿ ತಪ್ಪಿತಸ್ಥರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು. ಈ ಪ್ರಕರಣದಲ್ಲಿ ಜಿಲ್ಲಾ ಮಟ್ಟ ಹಾಗೂ ವಸತಿ ಇಲಾಖೆಯ ಅಧಿಕಾರಿಗಳು ಶಾಮೀಲಾಗಿದ್ದು ಮೇಲ್ನೋಟಕ್ಕೆ ಸಾಬೀತಾಗಿದೆ ಎಂದರು.
ಈ ಬಗ್ಗೆ ಎಷ್ಟೇ ದೊಡ್ಡ ಅಧಿಕಾರಿಗಳಿದ್ದರು. 15 ದಿನಗಳಲ್ಲಿ ಕ್ರಮ ಕೈಗೊಳ್ಳಲಾಗುವುದು. ವಸತಿ ಯೋಜನೆಯಲ್ಲಿ ಗೋಲ್ಮಾಲ್ ಆಗಿರುವುದರಿಂದ ಹಣ ಬಿಡುಗಡೆಗೆ ಸ್ಥಗಿತಗೊಳಿಸಲಾಗಿದೆ ಎಂದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 