ಕ್ರೀಡಾ ಶಾಲೆಯ ಕ್ರೀಡಾಪಟುಗಳಿಗೆ ಚಿನ್ನದ ಪದಕ
ಬಾಗಲಕೋಟೆ: ಚಿಕ್ಕಮಗಳೂರು ಜಿಲ್ಲೆಯಲ್ಲಿ ಇತ್ತೀಚೆಗೆ ಜರುಗಿದ ರಾಜ್ಯ ಮಟ್ಟದ ಪ್ರಾಥಮಿಕ ಮತ್ತು ಪ್ರೌಡ ವಿಭಾಗದ ಶಾಲಾ ಕುಸ್ತಿ ಪಂದ್ಯಾವಳಿಗಳಲ್ಲಿ ಬಾಗಲಕೋಟೆ ಕ್ರೀಡಾ ಶಾಲೆಯ ಕ್ರೀಡಾಪಟುಗಳು 4 ಚಿನ್ನ, 2 ಬೆಳ್ಳಿ ಹಾಗು 5 ಕಂಚಿನ ಪದಕಗಳನ್ನು ಪಡೆದುಕೊಂಡಿದ್ದಾರೆ.
ನವದೆಹಲಿಯಲ್ಲಿ ಇತ್ತೀಚೆಗೆ ಜರುಗಿದ ರಾಷ್ಟ್ರ ಮಟ್ಟದ ಪ್ರಾಥಮಿಕ ಮತ್ತು ಪ್ರೌಡ ವಿಭಾಗದ ಶಾಲಾ ಕುಸ್ತಿ ಪಂದ್ಯಾವಳಿಗಳಲ್ಲಿಯೂ ಸಹ ಬಾಗಲಕೋಟೆಯ ಕ್ರೀಡಾ ಶಾಲೆಯ ಕಲ್ಪಣಾ ಕೆಂಪನ್ನವರ ಒಂದು ಕಂಚಿನ ಪದಕ ಪಡೆದುಕೊಂಡಿದ್ದಾರೆ.
ವಿಜಪುರದಲ್ಲಿ ಜರುಗಿದ ರಾಜ್ಯ ಮಟ್ಟದ ಟ್ರ್ಯಾಕ್ ಸೈಕ್ಲಿಂಗ್ ಚಾಂಪಿಯನ್ಶಿಪ್ನಲ್ಲಿ ಸಹ 2 ಚಿನ್ನ, 2 ಬೆಳ್ಳಿ, ಮತ್ತು 1 ಕಂಚಿನ ಪದಕಗಳನ್ನು ಕ್ರೀಡಾ ಶಾಲೆಯ ಕ್ರೀಡಾಪಟುಗಳು ಪಡೆದುಕೊಂಡಿದ್ದಾರೆ.
ಪದಕ ವಿಜೇತರಾದ ಎಲ್ಲ ಕುಸ್ತಿ ಮತ್ತು ಸೈಕ್ಲಿಂಗ್ ಕ್ರೀಡಾಪಟುಗಳಿಗೂ ಹಾಗೂ ಕುಸ್ತಿ ತರಬೇತುದಾರರಾದ ಕಾಡೇಶ ನ್ಯಾಮಗೌಡ ಹಾಗೂ ಸೈಕ್ಲಿಂಗ್ ತರಬೇತುದಾರರಾದ ಅನಿತಾ ನಿಂಬರಗಿ ಹಾಗೂ ಸಂಗಪ್ಪ ನ್ಯಾಮಗೌಡ ಅವರನ್ನು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿದರ್ೇಶಕ ಎಂ.ಎನ್.ಮೇಲಿನಮನಿ ಅಭಿನಂದಿಸಿದ್ದಾರೆ.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 