ಪೊಲೀಸ್ ಇಲಾಖೆಯ ಹಳೇ ಸಂಪ್ರದಾಯಕ್ಕೆ ಪ್ರವೀಣ್ ಸೂದ್ ಗುಡ್ ಬೈ; ಸರಳತೆ ಮೊರೆ ಹೋದ ಡಿಜಿ
ಬೆಂಗಳೂರು, ಜೂ.5, ಪೊಲೀಸ್ ಇಲಾಖೆಯ ಹಳೆಯ ಸಂಪ್ರದಾಯವೊಂದಕ್ಕೆ ರಾಜ್ಯ ಪೊಲೀಸ್ ಮಹಾ ನಿರ್ದೇಶ ಪ್ರವೀಣ್ ಸೂದ್ ಅವರು ತೀಲಾಂಜಲಿ ಹಾಡಿದ್ದಾರೆ.ಇನ್ನು, ಮುಂದಿನ ದಿನಗಳಲ್ಲಿ ಐಜಿಪಿ ಅವರು ತಮ್ಮ ಕಚೇರಿಯಿಂದ ಹೊರಗಡೆ ಬಂದಾಗ ಹಾಗೂ ರಾಜ್ಯ ಪ್ರವಾಸ ಕೈಗೊಂಡಾಗ ಸ್ಥಳೀಯ ಪೊಲೀಸರು ರಸ್ತೆ ಬದಿ ಅಲ್ಲಲ್ಲಿ ಶಿಸ್ತಾಗಿ ನಿಂತು ಅವರಿಗೆ ಸೆಲ್ಯೂಟ್ ಹೊಡೆಯುತ್ತಿದ್ದರು. ಆದರೀಗ ಈ ಪದ್ದತಿಗೆ ಗುಡ್ ಬೈ ಹೇಳಲಾಗಿದೆ.ಡಿಜಿ ಮತ್ತು ಐಜಿಪಿ ಯಾವುದೇ ವೇಳೆ ರಾಜ್ಯ ಪ್ರವಾಸ ಕೈಗೊಂಡಾಗ ಜಿಲ್ಲಾ ಸರಹದ್ದು ದಾಟುವವರೆಗೂ ಪೊಲೀಸರನ್ನು ಕಳುಹಿಸಲಾಗುತ್ತಿತ್ತು. ಅಲ್ಲದೇ, ಈ ಸಂದರ್ಭದಲ್ಲಿ ಆಯಾ ಜಿಲ್ಲೆಗಳ ಡಿಎಸ್ಪಿ, ಇನ್ಸ್ಪೆಕ್ಟರ್, ಸಬ್ ಇನ್ಸ್ಪೆಕ್ಟರ್ಗಳು ರಸ್ತೆ ಬದಿ ನಿಲ್ಲುತ್ತಿದ್ದರು. ಆದರೀಗ ಯಾವ ಅಧಿಕಾರಿಯೂ ರಸ್ತೆಯಲ್ಲಿ ನಿಂತು ಕಾಯುವ ಅವಶ್ಯಕತೆ ಇಲ್ಲ. ತಮ್ಮ ಪಾಡಿಗೆ ತಾವು ಕೆಲಸ ಮಾಡಿ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಅವರು ಸಿಬ್ಬಂದಿಗೆ ಸೂಚಿಸಿದ್ದಾರೆ.
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ 