ಉತ್ತಮ ಹವ್ಯಾಸಗಳು ಮಾನಸಿಕ ಆರೋಗ್ಯಕ್ಕೆ ಪೂರಕ : ಮಂಜುನಾಥ್ ಮಸಳಿ
ವಿಜಯಪುರ 30: ಸರಿಯಾದ
ಆಹಾರ ಕ್ರಮ, ಉತ್ತಮ ನಿದ್ದೆ, ದೈಹಿಕ ವ್ಯಾಯಾಮ ಹಾಗೂ ನಗುವಿನೊಂದಿಗೆ ಕೆಲಸ
ನಿರ್ವಹಣೆಯಂತಹ ಉತ್ತಮ ಹವ್ಯಾಸಗಳಿಂದ ಕಾರ್ಯಕ್ಷೇತ್ರದಲ್ಲಿ ಮಾನಸಿಕ ಒತ್ತಡವನ್ನು ನಿರ್ವಹಣೆ ಮಾಡಿಕೊಂಡು ಮಾನಸಿಕ ಆರೋಗ್ಯ ವೃದ್ದಿಸಿಕೊಳ್ಳಬಹುದು ಎಂದು ಜಿಲ್ಲಾ ಮನೋರೋಗ
ತಜ್ಞರಾದ ಡಾ.ಮಂಜುನಾಥ ಮಸಳಿ
ಅವರು ಹೇಳಿದರು.
ನಗರದ
ಕೇಂದ್ರ ಕಾರಾಗೃಹದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಶ್ರಯದಲ್ಲಿ ಆಯೋಜಿಸಿದ ಒಂದು ದಿನದ ಕಾಯರ್ಾಗಾರದಲ್ಲಿ
ಭಾಗವಹಿಸಿ ಅವರು ಮಾತನಾಡಿ, ದುಶ್ಚಟಗಳಿಂದ
ದೂರವಿದ್ದು ಉತ್ತಮ ಅಭ್ಯಾಸಗಳನ್ನು ರೂಢಿಸಿಕೊಂಡರೆ ಮಾನಸಿಕ ಒತ್ತಡದಿಂದ ದೂರ ಇರಬಹುದು ಎಂದು ಹೇಳಿದರು.
ಕಾಯರ್ಾಗಾರವನ್ನು
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಮಹೇಂದ್ರ ಕಾಪ್ಸೆ,
ಉದ್ಘಾಟಿಸಿದರು. ಕೇಂದ್ರ ಕಾರಾಗೃಹದ ಅಧೀಕ್ಷಕ ಡಾ.ಮಲ್ಲಿಕಾಜರ್ುನ ಸ್ವಾಮಿ
, ಕಾರ್ಯಕ್ರಮ ಅಧಿಕಾರಿಗಳಾದ ಡಾ.ರಾಜೇಶ್ವರಿ ಗೊಲಗೇರಿ,
ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ.ಸಂಪತ್ ಗುಣಾರಿ,
ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ಐ.ಎಸ್.
ಧಾರವಾಡಕರ ಸೇರಿದಂತೆ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮದ ಸಿಬ್ಬಂದಿಗಳು, ಕೇಂದ್ರ ಕಾರಾಗೃಹದ ಸಿಬ್ಬಂದಿಗಳು, ಇತರರು
ಉಪಸ್ಥಿತರಿದ್ದರು. ಜೈಲರ್ ಅಂಬರಿಶ ಪೂಜಾರಿ ಪ್ರಾರಂಭದಲ್ಲಿ
ಸ್ವಾಗತಿಸಿ, ಕೊನೆಯಲ್ಲಿ ವಂದಿಸಿದರು.
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ
ಬಿಗಿ ಭದ್ರತೆಯ ನಡುವೆ 6,200ಕ್ಕೂ ಹೆಚ್ಚು ಅಮರನಾಥ ಯಾತ್ರಿಕರು ಜಮ್ಮುವಿನಿಂದ ಪ್ರಯಾಣ ಬೆಳೆಸಿದರು
ಬೆಳಗಾವಿಯ ಜಿಮಖಾನಾ ಕ್ಲಬ್ನಲ್ಲಿ ಗುಂಡಿನ ದಾಳಿ; ವ್ಯಕ್ತಿ ಅದೃಷ್ಟವಶಾತ್ ಪಾರು
ವಾರಾಣಸಿಯ 27 ವರ್ಷದ ಯುವಕನಿಗೆ ಕೋವಿಡ್-19 ದೃಢ; ಬಿಎಚ್ಯು ಆಸ್ಪತ್ರೆಗೆ ದಾಖಲಾತಿ 