ಸಾವಿತ್ರಿಬಾಯಿ ಫುಲೆ ಕಾಂಗ್ರೆಸ್ ಗೆ ಗುಡ್ ಬೈ, ಹೊಸ ಪಕ್ಷ ಘೋಷಣೆ
ನವದೆಹಲಿ, ಡಿಸೆಂಬರ್ 26 ಮಾಜಿ ಸಂಸದೆ ಹಾಗೂ ಕಾಂಗ್ರೆಸ್ ನಾಯಕಿ ಸಾವಿತ್ರಿಬಾಯಿ
ಫುಲೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ, ದಲಿತರ ಆಶೋತ್ತರಕ್ಕಾಗಿ ಹೊಸ ಪಕ್ಷ ಕಟ್ಟುವ
ಘೋಷಣೆ ಮಾಡಿದ್ದಾರೆ. ಪ್ರಮುಖ ದಲಿತ ನಾಯಕಿಯಾಗಿರುವ
ಫುಲೆ ಕಳೆದ ವರ್ಷ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪುಣ್ಯತಿಥಿಯಂದು ಬಿಜೆಪಿಗೆ ರಾಜೀನಾಮೆ ನೀಡಿದ್ದರು,ಈಗ ಕ್ರಿಸ್ಮಸ್ ಸಯಯದಲ್ಲೀ ಕೈಗೆ ರಾಜಿನಾಮೆ ಕೊಟ್ಟು ಹೊರಬಂದಿದ್ದಾರೆ. ಆಡಳಿತ ಬಿಜೆಪಿ ಸಮಾಜದ ವಿಭಜನೆಗೆ
ಪ್ರಯತ್ನಿಸುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಸೇರಿದ್ದ ಅವರು ಇದೀಗ ಕಾಂಗ್ರೆಸ್ ನಲ್ಲಿ
ತನ್ನ ಧ್ವನಿ, ನೋವು ಕೇಳುತ್ತಿಲ್ಲ ಎಂಬ ನೋವಿನ ಮೇರೆಗೆ
ಪಕ್ಷ ತೊರೆದಿದ್ದಾರೆ.ಬಿಎಸ್ ಪಿ ನಾಯಕಿ ಮಾಯಾವತಿಗೆ ನಿಕಟವಾಗಿದ್ದ ಸಾವಿತ್ರಿ ಪುಲೆ
2000 ರಲ್ಲಿ ಬಿಜೆಪಿ ಸೇರ್ಪಡೆಗೊಂಡಿದ್ದರು. 2002, 2007 ಮತ್ತು 2012 ರಲ್ಲಿ ವಿಧಾನಸಭಾ ಚುನಾವಣೆಯಲ್ಲಿ
ಸ್ಪರ್ಧಿಸಿದ್ದರು. 2012 ರಲ್ಲಿ ಜಯ ಗಳಿಸಿದ್ದರು . 2014 ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ
ಲೋಕಸಭೆಗೆ ಪ್ರವೇಶ ಮಾಡುವಲ್ಲಿ ಅವರು ಯಶಸ್ವಿಯಾಗಿದ್ದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 