ಕಂಪ್ಲಿ, 02 : ತಾಲ್ಲೂಕು ಕೇಂದ್ರವಾಗಿರುವುದರಿಂದ ಪಟ್ಟಣದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯನ್ನು ಶ್ವಾತವಾಗಿ ಆರಂಭಿಸುವಂತೆ ಒತ್ತಾಯಿಸಿ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕದ ಪದಾಧಿಕಾರಿಗಳು ಶಾಸಕ ಜೆ.ಎನ್.ಗಣೇಶ್ ಅವರಿಗೆ ಮನವಿ ಪತ್ರವನ್ನು ಸಲ್ಲಿಸಿದರು ನಂತರ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಎಚ್. ದೊಡ್ಡಬಸಪ್ಪ ಮಾತನಾಡಿ ಕಂಪ್ಲಿಯಲ್ಲಿ ಬಿಇಒ ಕಚೇರಿ ಆರಂಭಕ್ಕೆ ಸಂಬಂಧಪಟ್ಟಂತೆ ಕಲಬುರಗಿಯ ಶಾಲಾ ಶಿಕ್ಷಣ ಇಲಾಖೆ ವಿಭಾಗದ ಹೆಚ್ಚುವರಿ ಆಯುಕ್ತರು 2025ರ ಏ.23 ರಂದು ಸುತ್ತೋಲೆ ಹೊರಡಿಸಿ ಬಿಇಒ ಕಚೇರಿ ಆರಂಭಿಸುವಂತೆ ಸೂಚಿಸಿದ್ದರು. ಆದರೆ ಕುರುಗೋಡು ಪಟ್ಟಣದಲ್ಲಿರುವ ಪಶ್ಚಿಮ ವಲಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗೆ ಕಂಪ್ಲಿ ಸೇರೆ್ಡಗೊಳಿಸಿದ್ದಾರೆಂದು ಅಸಮಧಾನ ವ್ಯಕ್ತಪಡಿಸಿದರು.
ಕಂಪ್ಲಿಯಲ್ಲಿ ಬಿಇಒ ಕಚೇರಿಯಿಂದ ವಂಚಿತವಾಗಿದ್ದು, 30 ಕಿ.ಮೀ.ದೂರದ ಕುರುಗೋಡಿಗೆ ಅಲೆಯಬೇಕಾದ ಅನಿವಾರ್ಯತೆ ಎದುರಾಗಿದೆ ಬಿಇಒ ಕಚೇರಿ ಆರಂಭದಿಂದ ಜನರಿಗೆ, ವಿದ್ಯಾರ್ಥಿಗಳಿಗೆ ಹಾಗೂ ಹತ್ತನೇ ತರಗತಿ ಫಲಿತಾಂಶ ಸುಧಾರಣೆಗೆ ಅನುಕೂಲವಾಗಲಿದೆ. ಸರ್ಕಾರ ಈ ಪಟ್ಟಣದಲ್ಲಿ ಶೀಘ್ರವಾಗಿ ಬಿಇಒ ಕಚೇರಿ ಆರಂಭಕ್ಕೆ ಕ್ರಮಕೈಗೊಳ್ಳುವಂತೆ ಒತ್ತಾಯಿಸಿದರು. ಮನವಿ ಸ್ವೀಕರಿಸಿದ ಶಾಸಕ ಜೆ.ಎನ್.ಗಣೇಶ ಅವರು ಕಂಪ್ಲಿ ಪಟ್ಟಣದಲ್ಲಿ ಬಿಇಒ ಕಚೇರಿ ಆರಂಭ ಕುರಿತಂತೆ ಶಿಕ್ಷಣ ಸಚಿವರು, ಮುಖ್ಯಮಂತ್ರಿಗಳೊಂದಿಗೆ ಚರ್ಚಿಸುವುದಾಗಿ ಭರವಸೆಯನ್ನು ನೀಡಿದರುಈ ಸಂದರ್ಭದಲ್ಲಿ ಸಂಘದ ಪದಾಧಿಕಾರಿಗಳಾದ ಸರ್ವೇಶ್, ಲಕ್ಷ್ಮಣನಾಯಕ್, ಟಿ.ಎಂ.ಬಸವರಾಜ್,ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಹನುಮಂತಪ್ಪ,ಸುನಿತಾ ಪೂಜಾರಿ,ಜಿಪಿಟಿ ಅಧ್ಯಕ್ಷ ಮಂಜುನಾಥ್, ಇಸಿಒ ರೇವಣ್ಣ, ಶಿಕ್ಷಕರಾದ ಚಂದ್ರಶೇಖರ್, ವಸಂತ, ಮರಿಸ್ವಾಮಿ, ಮಲ್ಲಿಕಾರ್ಜುನ, ರವಿ, ವೀರೇಶ್, ಮಂಜುನಾಥ್ ಸೇರಿದಂತೆ ಇತರರು ಇದ್ದರು.