ಸರ್ಕಾರ ರಚನೆ ಸಂಬಂಧ ಎನ್ಸಿಪಿ ಶಾಸಕರ ಸಭೆ: ಷರತ್ತುಬದ್ಧ ಬೆಂಬಲ ನೀಡಲು ನಿರ್ದಾರ
ಮುಂಬೈ, ನ.11 : ಶಿವಸೇನೆಯೊಂದಿಗೆ ಸರ್ಕಾರ ರಚಿಸುವ ಪ್ರಸ್ತಾಪದ ಬಗ್ಗೆ ಚರ್ಚಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್ಸಿಪಿ) ಸೋಮವಾರ ಪಕ್ಷದ ಶಾಸಕರ ಸಭೆ ನಡೆಸಿತು. ಶಿವಸೇನೆಗೆ ಷರತ್ತುಬದ್ಧ ಬೆಂಬಲ ನೀಡಲು ಯೋಜನೆ ಅಂತಿಮಗೊಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಆದರೆ ಶಿವಸೇನೆಯು ಬಿಜೆಪಿಯೊಂದಿಗಿನ ಸಂಬಂಧವನ್ನು ಕಸಿದುಕೊಳ್ಳಬೇಕು, ಎನ್ಡಿಎ ಕೂಟದಿಂದ ಹೊರಬರಬೇಕು ಎಂಬ ಷರತ್ತು ಹಾಕಲಾಗಿದೆ ಎನ್ನಲಾಗಿದೆ. ಮಾತ್ರವಲ್ಲ ಸಾಮಾನ್ಯ ಕನಿಷ್ಠ ಕಾರ್ಯಕ್ರಮವನ್ನು ರೂಪಿಸಬೇಕು ಎಂಬ ನಿಬಂಧನೆ ಹಾಕಲಾಗಿದೆ ಎಂದು ಮೂಲಗಳು ತಿಳಿಸಿವೆ. ಮತ್ತೊಂದೆಡೆ, ಕಾಂಗ್ರೆಸ್ನ ಉನ್ನತ ನಾಯಕರು ಕೂಡ ನವದೆಹಲಿಯಲ್ಲಿ ಸಭೆ ನಡೆಸುತ್ತಿದ್ದು, ಹೈಕಮಾಂಡ್ನಿಂದ ಒಪ್ಪಿಗೆ ದೊರೆತ ಬಳಿಕ ಸರ್ಕಾರ ರಚನೆಗೆ ಚಾಲನೆ ನೀಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 