ದುಬೈ ಕನ್ನಡಿಗರ ರಕ್ಷಣೆಗೆ ಸರ್ಕಾರ ಬದ್ಧ: ಬಸವರಾಜ ಬೊಮ್ಮಾಯಿ
ಬೆಂಗಳೂರು,
ಏ.19, ದುಬೈ ಸೇರಿದಂತೆ ಯುಎಇ ಸಂಯುಕ್ತ ಸಂಸ್ಥಾನಗಳಿಗೆ ಉದ್ಯೋಗಕ್ಕೆ
ತೆರಳಿರುವ ಕನ್ನಡಿಗರು ಕೊರೊನಾ ಲಾಕ್ ಡೌನ್ ನಿಂದ ಸಂಕಷ್ಟಕ್ಕೆ ಸಿಲುಕಿರುವುದು
ಸರ್ಕಾರದ ಗಮನಕ್ಕೆ ಬಂದಿದ್ದು, ಯುಎಇಯಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಕನ್ನಡಿಗರ
ರಕ್ಷಣೆಗೆ ಸರ್ಕಾರ ಬದ್ದವಾಗಿದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.ಈ
ಕುರಿತು ಮಾಧ್ಯಮ ಹೇಳಿಕೆ ನೀಡಿರುವ ಅವರು, ದುಬೈನಲ್ಲಿ ಅನೇಕ ಕಾರ್ಮಿಕರು ಆಹಾರ ಮತ್ತು
ವೈದ್ಯಕೀಯ ಸೇವೆ ನಿರೀಕ್ಷೆಯಲ್ಲಿರುವುದು ಗಮನಕ್ಕೆ ಬಂದಿದ್ದು, ದುಬೈನಲ್ಲಿರುವ ಕನ್ನಡ
ಸಂಘಟನೆಯ ಪ್ರವೀಣ್ ಕುಮಾರ್ ಶೆಟ್ಟಿ, ಬಸವ ಸಮಿತಿಯ ಚಂದ್ರಶೇಖರ್ ಲಿಂಗದಹಳ್ಳಿಯವರು
ಕಾರ್ಮಿಕರಿಗೆ ಆಹಾರ ಮತ್ತು ವೈದ್ಯಕೀಯ ಸೇವೆಯನ್ನು ಒದಗಿಸುತ್ತಿರುವುದು ಶ್ಲಾಘನೀಯ.
ಸರ್ಕಾರ ಅವರೊಂದಿಗೆ ನಿರಂತರ ಸಂಪರ್ಕದಲ್ಲಿದೆ ಎಂದು ತಿಳಿಸಿದ್ದಾರೆ.ರಾಜ್ಯ
ಸರ್ಕಾರ ಕೊರೊನಾ ಲಾಕ್ ಡೌನ್ ಅವಧಿ ಮುಗಿದ ತಕ್ಷಣ ದುಬೈನಲ್ಲಿ ತೊಂದರೆಗೆ ಸಿಲುಕಿರುವ
ಕನ್ನಡಿಗರನ್ನು ಸುರಕ್ಷಿತವಾಗಿ ವಾಪಸ್ ಕರೆತರಲು ಕೇಂದ್ರ ಸರ್ಕಾರದ ಜೊತೆ ಚರ್ಚಿಸಿ
ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಅಲ್ಲಿಯವರೆಗೂ ದುಬೈನಲ್ಲಿರುವ ಕನ್ನಡಿಗ ಉದ್ಯಮಿಗಳು
ಅಸಹಾಯಕ ಕಾರ್ಮಿಕರಿಗೆ ಆಹಾರ ಹಾಗೂ ಇತರ ಅಗತ್ಯ ಸೇವೆಗಳನ್ನು ಒದಗಿಸಲು
ವಿನಂತಿಸಿಕೊಳ್ಳುತ್ತೇನೆ. ರಾಜ್ಯ ಸರ್ಕಾರ ಯಾವಾಗಲೂ ನಿಮ್ಮ ಕಾಯಲು ಬದ್ಧವಾಗಿದೆ ಎಂದು
ಹೇಳಿದ್ದಾರೆ.
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ 