ಸರ್ಕಾರ ನಿಷ್ಕ್ರಿಯ: ರಾಜ್ಯಪಾಲರಿಗೆ ಕಾಂಗ್ರೆಸ್ ದೂರು
KPCC
ಬೆಂಗಳೂರು, ನ. 28-ರಾಜ್ಯದ ಅಭಿವೃದ್ಧಿ ಕೆಲಸಗಳನ್ನೆಲ್ಲ ನಿರ್ಲಕ್ಷಿಸಿ, ಜನತೆಯ ಸಮಸ್ಯೆಗಳಿಗೆ ಸ್ಪಂದಿಸದೇ ಸರ್ಕಾರಕ್ಕೆ ಸರ್ಕಾರವೇ ಉಪಚುನಾವಣೆಯಲ್ಲಿ ಭಾಗಿಯಾಗಿದೆ ಎಂದು ಆರೋಪಿಸಿ ಕೆಪಿಸಿಸಿ ರಾಜ್ಯಪಾಲರಿಗೆ ದೂರು ಸಲ್ಲಿಸಿದೆ.
ರಾಜ್ಯಪಾಲ ವಜೂಭಾಯಿ ವಾಲಾ ಅವರ ಅನಾರೋಗ್ಯ ಕಾರಣದಿಂದಾಗಿ ಅವರ ನೇರ ಭೇಟಿ ಸಾಧ್ಯವಾಗದೇ ಇರುವುದರಿಂದ ಟಪಾಲು ಮೂಲಕ ಮೇಲ್ಮನೆ ಸದಸ್ಯ ಪ್ರಕಾಶ್ ರಾಥೋಡ್ ನೇತೃತ್ವದ ಕಾಂಗ್ರೆಸ್ ನಿಯೋಗ ಗುರುವಾರ ದೂರು ಸಲ್ಲಿಸಿತು.
ಸರ್ಕಾರದ ಸಚಿವರಿಂದ ನೀತಿ ಸಂಹಿತೆ ಉಲ್ಲಂಘನೆಯಾದರೂ ಆಯೋಗ ಕಣ್ಮುಚ್ಚಿ ಕುಳಿತಿದೆ. ಇಡೀ ಮಂತ್ರಿಮಂಡಲವೇ ಚುನಾವಣಾ ಪ್ರಚಾರದಲ್ಲಿ ತೊಡಗಿಕೊಂಡಿರುವುದರಿಂದ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯದೇ ಸರ್ಕಾರದ ಆಡಳಿತ ಯಂತ್ರ ಸ್ಥಗಿತಗೊಂಡಿದೆ. ಮುಖ್ಯಮಂತ್ರಿಗಳಾದಿಯಾಗಿ ಎಲ್ಲಾ ಸಚಿವರು ಉಪಚುನಾವಣೆಯಲ್ಲಿ ಭಾಗಿಯಾಗಿದ್ದರಿಂದ ರಾಜ್ಯದ ಶಕ್ತಿ ಕೇಂದ್ರ ವಿಧಾನಸೌಧ ಖಾಲಿಯಾಗಿದೆ ಎಂದು ದೂರಿನಲ್ಲಿ ಹೇಳಲಾಗಿದೆ.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 