ರಾಜಪೂತ ಸಮುದಾಯಕ್ಕೆ ಪ್ರಾಧಿಕಾರ ರಚಿಸುವಂತೆ ಸರ್ಕಾರಕ್ಕೆ ಒತ್ತಾಯ
Government urged to form an authority for the Rajput community
ಲೋಕದರ್ಶನ ವರದಿ
ಗದಗ 30 : ರಾಜ್ಯದಲ್ಲಿ ಲಕ್ಷಾಂತರ ಜನಸಂಖ್ಯೆ ಹೊಂದಿರುವ ರಜಪೂತ ಸಮಾಜವು ಆರ್ಥಿಕವಾಗಿ ಶೈಕ್ಷಣಿಕವಾಗಿ ಹಾಗೂ ಉದ್ಯೋಗ ರಂಗದಲ್ಲಿ ತೀವ್ರವಾಗಿ ಹಿಂದುಳಿದಿದೆ. ನಮ್ಮ ಯುವ ಪೀಳಿಗೆಗೆ ಸೂಕ್ತ ಪ್ರೋತ್ಸಾಹ ಮತ್ತು ಮಾರ್ಗದರ್ಶನ ಸಿಗದೇ ಸಮಾಜವು ಇಂದಿಗೂ ಮುಖ್ಯವಾಹಿನಿಗೆ ಬರುವದು ಸಾಧ್ಯವಾಗಿಲ್ಲ ಆದ್ದರಿಂದ ರಜಪೂತ ಪ್ರಾಧಿಕಾರವನ್ನು ರಾಜ್ಯ ಸರಕಾರ ಪ್ರಾರಂಭಿಸಿ ಸೂಕ್ತ ಸಹಾಯ ಸೌಲಭ್ಯಗಳು ಒದಗಿಸಿಕೊಡಬೇಕೆಂದು ಗದಗ ಬೆಟಗೇರಿ ರಜಪೂತ ಸಮಾಜದ ವತಿಯಿಂದ ಮಾನ್ಯ ಮುಖ್ಯಮಂತ್ರಿಗಳಿಗೆ ಗದಗ ಜಿಲ್ಲಾಧಿಕಾರಿ ಶ್ರೀ ಸಿ.ಎನ್. ಶ್ರೀಧರ ಅವರಿಗೆ ಇಂದು ಸಮಾಜದ ಅಧ್ಯಕ್ಷ ಗಣೇಶಸಿಂಗ್ ಬ್ಯಾಳಿ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು. ಮನವಿ ಸ್ವೀಕರಿಸಿದ ಜಿಲ್ಲಾಧಿಕಾರಿಗಳು ಸೂಕ್ತ ಶಿಫಾರಸ್ಸಿನೊಂದಿಗೆ ಮುಖ್ಯಮಂತ್ರಿಗಳಿಗೆ ಕಳುಹಿಸಿಕೊಡಲಾಗುವದೆಂದು ಭರವಸೆ ನೀಡಿದರು. ಈ ಸಂದರ್ಭದಲ್ಲಿ ದೇವಿಸಿಂಗ್ ಬ್ಯಾಳಿ, ಶೇಡುಸಿಂಗ್ ಜಮಾದಾರ ಮತ್ತಿತರರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 