ಸಾರ್ವಜನಿಕ ಮೂಲಭೂತ ಸೌಕರ್ಯ ಹೆಚ್ಚಿಸಲು ಅನುದಾನ ದೊರಕಿಸಲಾಗಿದೆ
Grants have been received to enhance public infrastructure
ಲೋಕದರ್ಶನ ವರದಿ
ಹಾನಗಲ್ 29 : ತಾಲೂಕಿನಲ್ಲಿ ಇದೇ ಮೊದಲ ಬಾರಿಗೆ ದೊಡ್ಡ ಪ್ರಮಾಣದಲ್ಲಿ ಸಾರ್ವಜನಿಕ ಮೂಲಭೂತ ಸೌಕರ್ಯ ಹೆಚ್ಚಿಸಲು ಅನುದಾನ ದೊರಕಿಸಲಾಗಿದೆ ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು. ತಾಲೂಕಿನ ಅರಳೇಶ್ವರ ಗ್ರಾಮದಲ್ಲಿ ? 50 ಲಕ್ಷ ವೆಚ್ಚದಲ್ಲಿ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿದ ಅವರು ಗ್ರಾಮೀಣ ಪ್ರದೇಶಗಳಲ್ಲಿ ಸಂಪರ್ಕ ರಸ್ತೆಗಳು ಹದಗೆಟ್ಟು ಸುಗಮ ಸಂಚಾರಕ್ಕೆ ಪರದಾಡುವ ಸ್ಥಿತಿ ಇತ್ತು. ಆದ್ಯತೆಯ ಮೇಲೆ ಅಂಥ ಕಾಮಗಾರಿಗಳಿಗೆ ಅನುದಾನ ಬಿಡುಗಡೆ ಮಾಡಲಾಗಿದೆ. 2023 ರ ಸಾರ್ವತ್ರಿಕ ಚುನಾವಣೆಗೆ ಮುನ್ನ ತಾಲೂಕಿನಲ್ಲಿ 52 ದಿನಗಳ ಕಾಲ ದೃಢಸಂಕಲ್ಪ ಯಾತ್ರೆ ಮೂಲಕ ಪಾದಯಾತ್ರೆಯಲ್ಲಿ ಸಂಚರಿಸಿ ಸಮಸ್ಯೆಗಳನ್ನು ಕಣ್ಣಾರೆ ಕಾಣಲಾಗಿತ್ತು. ಆ ಸಮಸ್ಯೆಗಳನ್ನು ಹಂತ, ಹಂತವಾಗಿ ಪರಿಹರಿಸಲಾಗುತ್ತಿದೆ ಎಂದು ತಿಳಿಸಿದರು. ಕೆಪಿಸಿಸಿ ಸದಸ್ಯ ಟಾಕನಗೌಡ ಪಾಟೀಲ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜು ಗೊರಣ್ಣನವರ, ಮುಖಂಡರಾದ ದಯಾನಂದ ನಾಗನೂರ, ಕೊಟ್ರ್ಪ ಅಂಗಡಿ, ಬಸವರಾಜ ಲೇಖಿ, ಮಲ್ಲೇಶ ಜಾವೋಜಿ, ಫಕ್ಕೀರ್ಪ ತೋಟದ, ಮಕ್ಬೂಲ್ ಹಿತ್ತಲಮನಿ, ಚನ್ನಬಸನಗೌಡ ಕಲಗೌಡ್ರ, ಲಿಂಗರಾಜ ಮಡಿವಾಳರ, ಅರುಣ ಮಣ್ಣಮ್ಮನವರ ಸೇರಿದಂತೆ ಇನ್ನಿತರರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 