ಸಾರ್ವಜನಿಕ ಮೂಲಭೂತ ಸೌಕರ್ಯ ಹೆಚ್ಚಿಸಲು ಅನುದಾನ ದೊರಕಿಸಲಾಗಿದೆ

ಸಾರ್ವಜನಿಕ ಮೂಲಭೂತ ಸೌಕರ್ಯ ಹೆಚ್ಚಿಸಲು ಅನುದಾನ ದೊರಕಿಸಲಾಗಿದೆ Grants have been received to enhance public infrastructure

ಲೋಕದರ್ಶನ ವರದಿ 

ಹಾನಗಲ್ 29 : ತಾಲೂಕಿನಲ್ಲಿ ಇದೇ ಮೊದಲ ಬಾರಿಗೆ ದೊಡ್ಡ ಪ್ರಮಾಣದಲ್ಲಿ ಸಾರ್ವಜನಿಕ ಮೂಲಭೂತ ಸೌಕರ್ಯ ಹೆಚ್ಚಿಸಲು ಅನುದಾನ ದೊರಕಿಸಲಾಗಿದೆ ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು. ತಾಲೂಕಿನ ಅರಳೇಶ್ವರ ಗ್ರಾಮದಲ್ಲಿ ? 50 ಲಕ್ಷ ವೆಚ್ಚದಲ್ಲಿ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿದ ಅವರು ಗ್ರಾಮೀಣ ಪ್ರದೇಶಗಳಲ್ಲಿ ಸಂಪರ್ಕ ರಸ್ತೆಗಳು ಹದಗೆಟ್ಟು ಸುಗಮ ಸಂಚಾರಕ್ಕೆ ಪರದಾಡುವ ಸ್ಥಿತಿ ಇತ್ತು. ಆದ್ಯತೆಯ ಮೇಲೆ ಅಂಥ ಕಾಮಗಾರಿಗಳಿಗೆ ಅನುದಾನ ಬಿಡುಗಡೆ ಮಾಡಲಾಗಿದೆ. 2023 ರ ಸಾರ್ವತ್ರಿಕ ಚುನಾವಣೆಗೆ ಮುನ್ನ ತಾಲೂಕಿನಲ್ಲಿ 52 ದಿನಗಳ ಕಾಲ ದೃಢಸಂಕಲ್ಪ ಯಾತ್ರೆ ಮೂಲಕ ಪಾದಯಾತ್ರೆಯಲ್ಲಿ ಸಂಚರಿಸಿ ಸಮಸ್ಯೆಗಳನ್ನು ಕಣ್ಣಾರೆ ಕಾಣಲಾಗಿತ್ತು. ಆ ಸಮಸ್ಯೆಗಳನ್ನು ಹಂತ, ಹಂತವಾಗಿ ಪರಿಹರಿಸಲಾಗುತ್ತಿದೆ ಎಂದು ತಿಳಿಸಿದರು. ಕೆಪಿಸಿಸಿ ಸದಸ್ಯ ಟಾಕನಗೌಡ ಪಾಟೀಲ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜು ಗೊರಣ್ಣನವರ, ಮುಖಂಡರಾದ ದಯಾನಂದ ನಾಗನೂರ, ಕೊಟ್ರ​‍್ಪ ಅಂಗಡಿ, ಬಸವರಾಜ ಲೇಖಿ, ಮಲ್ಲೇಶ ಜಾವೋಜಿ, ಫಕ್ಕೀರ​‍್ಪ ತೋಟದ, ಮಕ್ಬೂಲ್ ಹಿತ್ತಲಮನಿ, ಚನ್ನಬಸನಗೌಡ ಕಲಗೌಡ್ರ, ಲಿಂಗರಾಜ ಮಡಿವಾಳರ, ಅರುಣ ಮಣ್ಣಮ್ಮನವರ ಸೇರಿದಂತೆ ಇನ್ನಿತರರಿದ್ದರು.