ಶಾಲೆಯ ಅಭಿವೃದ್ಧಿಗೆ ಹೆಚ್ಚಿನ ಒತ್ತು: ಸುನಂದಾ ವಾಲಿಕಾರ
Greater emphasis on school development: Sunanda Valikara
ಶಾಲೆಯ ಅಭಿವೃದ್ಧಿಗೆ ಹೆಚ್ಚಿನ ಒತ್ತು: ಸುನಂದಾ ವಾಲಿಕಾರ
ಇಂಡಿ 27: ಇಂದಿನ ಮಕ್ಕಳು ಮುಂದಿನ ಭವ್ಯ ಭಾರತದ ಪ್ರಜೆಗಳು ಅವರಿಗೆ ಉತ್ತಮ ಶಿಕ್ಷಣ ಜೊತೆಗೆ ಕ್ರೀಡಾ ಮನೋಭಾವ ಬೆಳೆಸುವ ಉದ್ದೇಶವೇ ನಮ್ಮದಾಗಿದೆ ಎಂದು ತಡವಲಗಾ ಗ್ರಾಮ ಪಂಚಾಯಿತಿ ಅಧ್ಯಕ್ಷ ಸುನಂದಾ ವಾಲಿಕಾರ ಹೇಳಿದರು.
ಅವರು ಇಂಡಿ ತಾಲೂಕಿನ ತಡವಲಗಾ ಗ್ರಾಮದ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಬಸವೇಶ್ವರ ವಸತಿ ಶಾಲೆ ಆವರಣದಲ್ಲಿ ನರೇಗಾ ಯೋಜನೆಯಡಿಯಲ್ಲಿ ನಿರ್ಮಿಸಲಾದ ವಾಲಿಬಾಲ್ ಕ್ರೀಡಾಂಗಣ ಉದ್ಘಾಟನೆ ಮಾಡಿ ಮಾತನಾಡಿದ ಅವರು ಶಾಲೆ ಜೀವನಂತ ದೇವಾಲಯದ, ಅಲ್ಲಿ ಕಲಿಯುವ ಮಕ್ಕಳು ದೇವರ ಸಮಾನ, ವಿದ್ಯಾರ್ಥಿಗಳ ಮಾನಸಿಕ ಮತ್ತು ದೈಹಿಕ ಆರೋಗ್ಯವನ್ನು ಹೆಚ್ಚಿಸಲು ಕ್ರೀಡೆಯು ಅತ್ಯಂತ ನಿರ್ಣಾಯಕ ಮತ್ತು ಪ್ರಯೋಜನಕಾರಿಯಾಗಿದೆ ಎಂದು ಹೇಳಿದರು.
ಆ ಶಾಲೆಯ ಮುಖ್ಯಗುರುಗಳಾದ ಚೆನ್ನಮ್ಮ ಝಳಕಿ ಅವರು ಮಾತನಾಡಿ ಕ್ರೀಡೆಗಳು ಎಲ್ಲಾ ರೀತಿಯ ಸ್ಪರ್ಧಾತ್ಮಕ ದೈಹಿಕ ಚಟುವಟಿಕೆಗಳಾಗಿವೆ, ಅದು ಪ್ರಾಸಂಗಿಕ ಅಥವಾ ಸಂಘಟಿತ ಭಾಗವಹಿಸುವಿಕೆಯ ಮೂಲಕ ದೈಹಿಕ ಸಾಮರ್ಥ್ಯ ಮತ್ತು ಕೌಶಲ್ಯಗಳನ್ನು ಬಳಸಿಕೊಳ್ಳುವ, ನಿರ್ವಹಿಸುವ ಅಥವಾ ಹೆಚ್ಚಿಸುವ ಗುರಿಯನ್ನು ಹೊಂದಿದೆ. ಕ್ರೀಡೆಯು ವ್ಯಕ್ತಿಯ ದೈನಂದಿನ ಜೀವನ ಮತ್ತು ಆರೋಗ್ಯದ ಮೇಲೆ ದೈಹಿಕ ಮತ್ತು ಮಾನಸಿಕ ಎರಡರಲ್ಲೂ ಗಮನಾರ್ಹ ಪರಿಣಾಮವನ್ನು ಬೀರುತ್ತದೆ. ನೀವು ಯಾವುದೇ ರೀತಿಯ ಕ್ರೀಡೆಗಳಲ್ಲಿ ತೊಡಗಿರುವಾಗ, ತೀವ್ರವಾದ ದೈಹಿಕ ಚಟುವಟಿಕೆಯು ಹೃದಯದ ಕಾರ್ಯವನ್ನು ಸುಧಾರಿಸುತ್ತದೆ ಎಂದು ಹೇಳಿದರು.ತಡವಲಗಾ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಂಜುನಾಥ್ ಡೊಳ್ಳಿ, ಗ್ರಾಮ ಪಂಚಾಯಿತಿ ಸದಸ್ಯರಾದ ಬಸಮ್ಮ ಖಸ್ಕಿ, ಮಲ್ಲಿಕಾರ್ಜುನ ಗುಡ್ಲಮನಿ, ಉಸ್ಮಾನ್ ಕಸ್ಸಾಬ, ಎಸ್ಡಿಎಂಸಿ ಅಧ್ಯಕ್ಷ ಶೋಭಾ ಮೇತ್ರಿ, ಮತ್ತು ರಮೇಶ ಸಿಂದಗೇರಿ, ಶಕೀಲ್ ಬಳಂ, ರಾಜಶೇಖರ ಅಳ್ಳೊಟ್ಟಿ, ಮಾಹಾನಂದ ಇಂಡಿ, ಅಶೋಕ ಇಂಡಿ, ಮಲ್ಲಮ್ಮ ಲೋಕುರ್ ಅಣ್ಣಾರಾಯ ಪಂತೋಜಿ, ಬಸವರಾಜ ಪಂತೋಜಿ, ಸೈಫನ್ ಮಲೀಕ್ ಜಾಲವಾದ, ಸಾಹೇಬಗೌಡ ಇಂಡಿ, ಯಶವಂತ ಖಸ್ಕಿ, ಹಾಗೂ ಶಿಕ್ಷಕರಾದ ಎಸ್ ಕೆ ಲಾಳಸಂಗಿ, ಎನ್ ಜಿ ರೊಳ್ಳಿ, ಎಸ್ ಸಿ ಗಿಡಗಂಟಿ, ಬಿ ಬಿ ಝಳಕಿ, ಎಸ್ ಬಿ ಅಂಗಡಿ, ಕವಿತಾ ಪಾಟೀಲ ಸೇರಿದಂತೆ ಮಕ್ಕಳು ಹಾಗೂ ಪಾಲಕರು ಉಪಸ್ಥಿತರಿದ್ದರು.
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ 