ಪಂಚ ಗ್ಯಾರಂಟಿ ಯೋಜನೆ ಯಿಂದ ರೂ. 270 ಕೋಟಿ ಹಣ ಜಮೆ
Grihalakshmi money deposited for 1054 deceased women
1054 ಮೃತ ಮಹಿಳೆಯರಿಗೆ ಗೃಹಲಕ್ಷ್ಮೀ ಹಣ ಜಮೆ
ಹೂವಿನಹಡಗಲಿ 02: ಪಂಚ ಗ್ಯಾರಂಟಿ ಯೋಜನೆಯಿಂದ 2026ನೇ ಸಾಲಿನ ಮಾರ್ಚ, ಏಪ್ರಿಲ್ ತಿಂಗಳು ಹೊರತುಪಡಿಸಿ ಈವರೆಗೆ ಗೃಹಲಕ್ಷ್ಮಿ ಯೋಜನೆಯಡಿಯಲ್ಲಿ ರೂ. 270ಕೋಟಿ ಹಣ ಪಾವತಿಯಾಗಿದೆ. 1054 ಮೃತ ಮಹಿಳೆಯರ ಖಾತೆಗೆ ಗೃಹಲಕ್ಷ್ಮೀ ಹಣ ಜಮೆ ಆಗಿದೆ ಎಂದು ಸಿಡಿಪಿಒ ರಾಮನಗೌಡ ಹೇಳಿದರು.ಹೂವಿನಹಡಗಲಿಯಲ್ಲಿ ಗ್ಯಾರಂಟಿ ಯೋಜನೆಗಳ ಪ್ರಗತಿ ಪರೀಶೀಲನಾ ಸಭೆಯಲ್ಲಿ ಮಾತನಾಡಿ ಮಾಹಿತಿ ನೀಡಿ 710 ಮೃತ ಮಹಿಳೆಯರನ್ನು ಪತ್ತೆ ಮಾಡಲಾಗಿದೆ. ಇನ್ನು 344 ಜನ ಮಾಹಿತಿ ಸಂಗ್ರಹಿಸುತ್ತೇವೆ ಎಂದು ಸಭೆಗೆ ಮಾಹಿತಿ ನೀಡಿದರು.
ತಾಲೂಕಿನಲ್ಲಿ ಈವರೆಗೂ 1205 ಅನರ್ಹ ಬಿಪಿಎಲ್ ಕಾರ್ಡ್ಗಳನ್ನು ಪತ್ತೆ ಮಾಡಿದ್ದು, 8.89 ಲಕ್ಷ ದಂಡ ವಸೂಲಿ ಮಾಡಲಾಗಿದೆ. 53176 ಬಿಪಿಎಲ್ ಕಾರ್ಡ್ಗಳಿಗೆ ಅಕ್ಕಿ ವಿತರಣೆ ಮಾಡಲಾಗುತ್ತದೆ ಎಂದು ಆಹಾರ ನರೀಕ್ಷಕ ನಾಗೇಂದ್ರ ಮಾಹಿತಿ ನೀಡಿದರು.ಪಂಚ ಗ್ಯಾರಂಟಿ ಯೋಜನೆಯಿಂದ ಅರ್ಹ ಫಲಾನುಭವಿಗಳು ವಂಚಿತರಾಗ ಬಾರದು ಎಂದು ಪಂಚ ಗ್ಯಾರಂಟಿ ಯೋಜನೆ ತಾಲೂಕು ಅದ್ಯಕ್ಷ ಪಿಟಿ.ಭರತ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ತಾ.ಪಂ.ಇಒ ಪರಮೇಶ್ವರ್ಪ, ಜಿಲ್ಲಾ ಸಮಿತಿ ಸದಸ್ಯ ಗುರುವಿನ ರಾಜು ಇದ್ದರು.
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ 