ಗುಂಪು ಘರ್ಷಣೆ: ವ್ಯಕ್ತಿಗೆ ಚೂರಿ ಇರಿತ, ವಾಹನಗಳಿಗೆ ಬೆಂಕಿ
Group clash: Man stabbed, vehicles set on fire
ಆರೋಪಿಗಳ ಬಂಧನಕ್ಕೆ ಜಾಲ ಬೀಸಿದ ಪೊಲೀಸರು
ಸಂಬರಗಿ 26: ಗ್ರಾಮದಲ್ಲಿ ಸೆ. 23ರಂದು ಗುಂಪು ಘರ್ಷಣೆಯಲ್ಲಿ ಸಂಜಯ ರಾಮಚಂದ್ರ ಟೋಣೆ ಇವರಿಗೆ ಹೊಟ್ಟೆಗೆ ಚೂರಿಯಿಂದ ಇರಿದು ಗಂಭೀರ ಗಾಯಗೊಂಡಿದ್ದು, ಮೀರಜ ಆಸ್ಪತ್ರೆಗೆ ದಾಖಲ ಮಾಡಲಾಗಿದೆ. ಶಸ್ತ್ರ ಚಿಕಿತ್ಸೆ ಮಾಡಲಾಗಿದ್ದು, ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾರೆ. ಸಂಶಯಿತ ಆರೋಪಿಗಳನ್ನು ಪೊಲೀಸರು ತನಿಖೆ ನಡೆಸಿದ್ದಾರೆ.
ಸಂಬರಗಿ ಗ್ರಾಮದಲ್ಲಿ ಸಪ್ಟೆಂಬರ 23ರಂದು ಸಾಯಂಕಾಲ ದಾದಾಸಾಹೇಬ ಶಂಕರ ಟೋಣೆ ಹಾಗೂ ಸಂಜಯ ಟೋಣೆ ಇವರ ನಡುವೆ ನಡೆದ ಜಟಾಪಟಿಯಲ್ಲಿ ಇವನಿಗೆ ಚೂರಿ ಇರಿದು ಗಾಯಗೊಳಿಸಿದ್ದಾರೆ. ಚಿಕ್ಕ ಜಗಳದಿಂದ ಇಷ್ಟರ ಮಟ್ಟಿಗೆ ಜಗಳ ಮುಂದುವರೆದಿದ್ದು, ಇವರ ಮನೆಯ ಎದುರಿಗೆ ಇದ್ದ 3 ಬೈಕ್ಗಳು, 1 ಗೂಡ್ಸ್ ಬುಲೆರೋಗೆ ಬೆಂಕಿ ಹಚ್ಚಿ ಸುಟ್ಟಿದ್ದಾರೆ. ಸಂಶಯಿತ ಆರೋಪಿಗಳನ್ನು ಹಿಡಿಯಲು ಪೋಲಿಸರು ಜಾಲ ಬೀಸಿದ್ದಾರೆ.
ಸಿ.ಸಿ ಟಿವಿ ಕ್ಯಾಮರಾದಲ್ಲಿ ರೆಕಾರ್ಡ್ ಆಗಿದೆ. ಆ ಕ್ಯಾಮರಾ ಪುಟೆಜ್ವನ್ನು ವಶಕ್ಕೆ ಪಡೆದು ತನಿಖೆ ನಡೆಸಿದ್ದಾರೆ. ಶೀಘ್ರದಲ್ಲಿ ಎಲ್ಲಾ ಆರೋಪಿಗಳನ್ನು ಬಂಧಿಸಲಾಗುವುದು ಎಂದು ಪೋಲಿಸ್ ಮೂಲಗಳು ತಿಳಿಸಿವೆ.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 