ಗ್ಯಾರಂಟಿ: ಹೊರೆಯಾದರೂ ಕೊಟ್ಟ ಮಾತಿನಂತೆ ಮುಂದುವರಿಯಬೇಕು
Guarantee: Keep your word, even if it's a burden
ಬೆಂಗಳೂರು : ಹೊರೆಯಾದರೂ ಕೂಡ ಕೊಟ್ಟ ಮಾತಿನಂತೆ ಗ್ಯಾರಂಟಿಗಳನ್ನ ಸರ್ಕಾರ ಈಡೇರಿಸಬೇಕು. ಇಲ್ಲದಿದ್ರೆ ಗ್ಯಾರಂಟಿ ಬಗ್ಗೆ ಹೇಳುವ ಮುಂಚಿತವಾಗಿ, ಮಾತು ಕೊಡುವುದಕ್ಕಿಂತ ಮುಂಚಿತವಾಗಿ ಚಿಂತನೆ ಮಾಡಬೇಕಾಗಿತ್ತು ಎಂದು ಮಾಜಿ ಸಂಸದ ಡಿಕೆ ಸುರೇಶ್ ಹೇಳಿದರು.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಇತ್ತೀಚೆಗಷ್ಟೇ ಡಿಸಿಎಂ ಡಿಕೆ ಶಿವಕುಮಾರ್ ಗ್ಯಾರಂಟಿಗಳಿಂದ ಸರ್ಕಾರಕ್ಕೆ ಹೊರೆ ಆಗುತ್ತಿದೆ ಎಂದು ಹೇಳಿದ್ದರು. ಈ ಸಂಬಂಧ ಪ್ರತಿಕ್ರಿುಸಿದ ಅವರು, ಗ್ಯಾರಂಟಿ ನಮ್ಮ ವಾಗ್ದಾನ. ಕರ್ನಾಟಕದ ಜನರಿಗೆ ಕೊಟ್ಟ ವಾಗ್ದಾನ, ಆ ವಾಗ್ದಾನದಂತೆ ನಡೆಯಬೇಕು ಎಂದರು.
ಯಾರು ಚುನಾವಣೆ ಎದುರಿಸಿದ್ರೋ ಅವರೆಲ್ಲ ಜನರಿಗೆ ನಂಬಿಕೆ ಕೊಟ್ಟಿದ್ದಾರೆ. ಹೊರೆಯಾದರೂ ಆಗಲಿ, ಏನಾದರೂ ಆಗ್ಲಿ ಕೊಟ್ಟ ಮಾತನ್ನ ಈಡೇರಿಸಲೇಬೇಕು. ಹೊರೆ ಆಗುತ್ತೆ ಅನ್ನೋದಾದ್ರೆ ಗ್ಯಾರಂಟಿ ಬಗ್ಗೆ ಹೇಳುವ ಮುನ್ನ, ಮಾತು ಕೊಡೋದಕ್ಕಿಂತ ಮುಂಚಿತವಾಗಿ ಚಿಂತನೆ ಮಾಡಬೇಕಾಗಿತ್ತು. ಈಗ ಮಾತು ಕೊಟ್ಟಾಗಿದೆ, ಅದರಂತೆ ನಡೆದುಕೊಳ್ಳಬೇಕು. 5 ವರ್ಷಗಳ ಕಾಲ ಏನೇ ಕಷ್ಟ ಆದ್ರೂ ಆ ಗ್ಯಾರಂಟಿಗಳನ್ನ ರಾಜ್ಯದ ಜನರಿಗೆ ನೀಡಬೇಕು ಎಂದು ಒತ್ತಾುಸಿದರು.
ಸಿರಿವಂತರು ಗ್ಯಾರಂಟಿ ತೆಗೆದುಕೊಳ್ತಿದ್ರೆ ಅದು ತಪ್ಪು ಎಂದು ಆಕ್ಷೇಪಿಸಿದರು. ಗ್ಯಾರಂಟಿ ಯೋಜನೆ ಯಾರು ಅಸಹಾಯಕರು, ಜೀವನ ನಡೆಸಲು ಕಷ್ಟ"ದೆ, ಯಾರು ಬದುಕಲ್ಲಿ ಹೋರಾಟ ಮಾಡ್ತಿದ್ದಾರೆ, ಅಂಥವರಿಗೆ ಆ ಯೋಜನೆಗಳು ಇರುವಂಥದ್ದು. ಸಿರಿವಂತರು ತೆಗೆದುಕೊಳ್ತಿದ್ರೆ ತಪ್ಪು ಎಂದು ಕಿ"ಮಾತು ಹೇಳಿದ್ರು. ಹಣೆ ಬರಹದಲ್ಲಿ ಬರೆದಿದ್ದರೆ ನನ್ನ ಅಣ್ಣ ಸಿಎಂ ಆಗುತ್ತಾರೆ. ಹಣೆಬರಹ ಇಲ್ಲ ಎಂದರೆ ಯಾರೂ ಏನೂ ಮಾಡಲು ಆಗುವುದಿಲ್ಲ" ಎಂದು ಬಮೂಲ್ ಅಧ್ಯಕ್ಷರಾದ ಡಿ.ಕೆ. ಸುರೇಶ್ ಅವರು ತಿಳಿಸಿದರು. ನೀವು ಶಸ್ತ್ರತ್ಯಾಗ ಮಾಡಿದ್ದೀರಾ ಎಂದು ಕೇಳಿದಾಗ, "ತ್ಯಾಗ ಮಾಡಲು ಶಸ್ತ್ರ ಇರಬೇಕಲ್ಲವೇ? ಶಸ್ತ್ರವೇ ಇಲ್ಲವಲ್ಲ. ಶಸ್ತ್ರ ಇದೆ ಎಂದು ನಾನು ಯಾವಾಗ ಹೇಳಿದ್ದೆ. ಶಸ್ತ್ರವೇ ಇಲ್
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 