ಗನ್ ಮ್ಯಾನ್ ವಿಷಯದಲ್ಲಿ ರಾಜಕೀಯ ಮಾಡಬಾರದು: ಡಿ.ಕೆ. ಶಿವಕುಮಾರ್
ಕಲಬುರಗಿ, ಜ 30, ನನಗೆ ಗನ್ಮ್ಯಾನ್ ಅವಶ್ಯಕತೆಯಿಲ್ಲ. ಆದರೆ, ಸರ್ಕಾರ ಈ ವಿಚಾರದಲ್ಲಿ ರಾಜಕೀಯ ಮಾಡಬಾರದು ಎಂದು ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. 27 ಮಾಜಿ ಸಚಿವರಿಗೆ ಸರ್ಕಾರದಿಂದ ಗನ್ಮ್ಯಾನ್ ವಾಪಾಸ್ಸು ಪಡೆದ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ರಾಜ್ಯ ಸರ್ಕಾರ ತನಗಿಷ್ಟದ ಪ್ರಕಾರ ಕೆಲಸ ಮಾಡುತ್ತಿದೆ. ಈ ಹಿಂದೆ ನಮ್ಮ ಸರ್ಕಾರದ ಅವಧಿಯಲ್ಲಿ ಹೀಗೇ ಮಾಡಿದ್ದೆವಾ ? ಎಂದು ಅವರು ಪ್ರಶ್ನಿಸಿದರು.
ಕೆಪಿಸಿಸಿಗೆ ಅಧ್ಯಕ್ಷರ ನೇಮಕ ವಿಚಾರ ಹಾದಿಬಿದಿಯಲ್ಲಿ ಮಾತನಾಡುವಂತಹದ್ದಲ್ಲ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.ತಾವು ಜೈಲುವಾಸದ ವೇಳೆ ಕಾರ್ಯಕರ್ತರು ಅಭಿಮಾನಿಗಳಿಂದ ಪ್ರತಿಭಟನೆ ನಡೆದಿದ್ದು, ಈ ವೇಳೆ ಸಾರ್ವಜನಿಕ ಆಸ್ತಿ ನಷ್ಟ ವಿಚಾರವಾಗಿ ಹೈಕೋಟ್೯ಗೆ ಪಿಐಎಲ್ ಸಲ್ಲಿಸಲಾಗಿದೆ. ಈ ಹಿಂದೆ ಯಾರ ಕೈವಾಡ ಇದೆ ಎಂಬುದು ತಮಗೆ ಗೊತ್ತಿದೆ ಎಂದರು.ಈ ಹಿಂದೆ ಅನೇಕ ಹೋರಾಟ, ಕಲ್ಲು ತುರಾಟಗಳಾಗಿವೆ, ಯಾರು ಕೂಡ ಪಿಐಎಲ್ ಹಾಕಿರಲಿಲ್ಲ. ನನಗೆ ತೊಂದರೆ ನೀಡುವುದೇ ಕೆಲವರ ಕೆಲಸವಾಗಿದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.ನನಗೆ ತೊಂದರೆ ಕೊಡುವುದರಲ್ಲಿಯೇ ಅವರಿಗೆ ಖುಷಿಯಾಗುತ್ತದೆ. ಆದರೆ, ಈ ಬಗ್ಗೆ ತಾವು ತಲೆ ಕೆಡಿಸಿಕೊಳ್ಳುವುದಿಲ್ಲ. ಎಲ್ಲಿ ನೋವಿರುತ್ತದೆಯೋ ಅಲ್ಲಿ ಸಂತೋಷ ಇರುತ್ತದೆ ಎಂದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 