ಎಚ್.ಕೆ. ಪಾಟೀಲರಿಗೆ ಸಚಿವ ಸ್ಥಾನ ನೀಡಬೇಕು: ಕೃಷ್ಣ ಎಚ್. ಹಡಪದ ಆಗ್ರಹ
H.K. Patil should be given a ministerial post: Krishna H. Hadapad demands
ಗದಗ, ಜು.09: ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಗದಗ ಜಿಲ್ಲೆಯ ಹೆಮ್ಮೆಯ ನಾಯಕರಾದ ಎಚ್.ಕೆ. ಪಾಟೀಲ ಅವರಿಗೆ ರಾಜ್ಯ ಸಚಿವ ಸಂಪುಟದಲ್ಲಿ ಪ್ರಮುಖ ಸ್ಥಾನ ನೀಡಬೇಕೆಂದು ಗದಗ ಜಿಲ್ಲಾ ಸವಿತಾ ಸಮಾಜದ ಜಿಲ್ಲಾಧ್ಯಕ್ಷ ಕೃಷ್ಣ ಎಚ್. ಹಡಪದ ಆಗ್ರಹಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಎಚ್.ಕೆ. ಪಾಟೀಲ ಅವರು ಕೇವಲ ರಾಜಕೀಯ ನಾಯಕರಲ್ಲ, ಅನುಭವಸಂಪನ್ನ ಹಾಗೂ ಜನಪರ ನಾಯಕರು. ಈ ಹಿಂದೆ ಸಚಿವರಾಗಿ ಕಾರ್ಯನಿರ್ವಹಿಸಿದ ಸಂದರ್ಭದಲ್ಲಿ ಉತ್ತರ ಕರ್ನಾಟಕದ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಿದ್ದರು ಎಂದು ಹೇಳಿದ್ದಾರೆ.
ಪ್ರಸ್ತುತ ರಾಜ್ಯದಲ್ಲಿ ಬರ ಪರಿಸ್ಥಿತಿ ಎದುರಾಗಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಸಂದರ್ಭದಲ್ಲಿ ಎಚ್.ಕೆ. ಪಾಟೀಲ ಅವರಂತಹ ಅನುಭವಿ ನಾಯಕತ್ವ ಸರ್ಕಾರಕ್ಕೆ ಅಗತ್ಯವಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ರಾಜ್ಯ ಸರ್ಕಾರ ಮತ್ತು ಪಕ್ಷದ ಹೈಕಮಾಂಡ್ ಯಾವುದೇ ವಿಳಂಬ ಮಾಡದೆ ಎಚ್.ಕೆ. ಪಾಟೀಲ ಅವರಿಗೆ ಸಚಿವ ಸಂಪುಟದಲ್ಲಿ ಮಹತ್ವದ ಜವಾಬ್ದಾರಿ ನೀಡಬೇಕು. ಇದರಿಂದ ಉತ್ತರ ಕರ್ನಾಟಕ ಭಾಗದ ಜನರ ನೀರೀಕ್ಷೆಗಳಿಗೆ ಸ್ಪಂದಿಸಿದಂತಾಗುತ್ತದೆ ಎಂದು ಕೃಷ್ಣ ಎಚ್. ಹಡಪದ ತಿಳಿಸಿದ್ದಾರೆ.
ಬೆಳಗಾವಿಯ ಜಿಮಖಾನಾ ಕ್ಲಬ್ನಲ್ಲಿ ಗುಂಡಿನ ದಾಳಿ; ವ್ಯಕ್ತಿ ಅದೃಷ್ಟವಶಾತ್ ಪಾರು
ವಾರಾಣಸಿಯ 27 ವರ್ಷದ ಯುವಕನಿಗೆ ಕೋವಿಡ್-19 ದೃಢ; ಬಿಎಚ್ಯು ಆಸ್ಪತ್ರೆಗೆ ದಾಖಲಾತಿ
ಕ್ಷುಲ್ಲಕ ಕಾರಣಕ್ಕೆ ಪಿಕಾಸಿಯಿಂದ ವ್ಯಕ್ತಿಯ ಹತ್ಯೆ : ಖಾನಾಪೂರ ತಾಲೂಕಿನಲ್ಲಿ ಘಟನೆ
ಟ್ರಂಪ್ ನೌಕಾ ದಿಗ್ಬಂಧನ ಕ್ರಮ ಘೋಷಣೆ; ಇರಾನ್ ಮೇಲೆ ಅಮೆರಿಕದ ಮೂರನೇ ರಾತ್ರಿ ದಾಳಿ
ಹೆಚ್ಚಿನ ಬಡ್ಡಿ ಆಮಿಷ, 25.79 ಕೋಟಿ ವಂಚನೆ: ಮುಖ್ಯ ಆರೋಪಿ ಬಂಧನ: ನೊಂದವರು ಮಾಳಮಾರುತಿ ಠಾಣೆಗೆ ಸಂಪರ್ಕಿಸಿ
ಶ್ರೀಮುರಳಿ ಅಭಿನಯದ ‘ಪರಾಕ್’ ಟೀಸರ್ ಬಿಡುಗಡೆ; ಭರ್ಜರಿ ಆ್ಯಕ್ಷನ್ ಮತ್ತು ತೀವ್ರ ಕಥಾಹಂದರದ ಸುಳಿವು 