ಪಂಚನದಿ ಸಚಿವಾಲಯ ಮಾಡಿ ಹೆಚ್.ಆರ್.ಶ್ರೀನಾಥ್ ಆಗ್ರಹ
H.R. Srinath demands creation of Panchanadi Ministry
ಗಂಗಾವತಿ 26: ಕಲುಷಿತ ನದಿಗಳು ಸ್ವಚ್ಛತೆಗಾಗಿ ಪ್ರತ್ಯೇಕ ಸಚಿವಾಲಯಗಳನ್ನು ಮಾಡುವ ಮೂಲಕ ನದಿ ಸ್ವಚ್ಛತೆಗೆ ಕ್ರಮ ಕೈಗೊಳ್ಳಬೇಕೆಂದು ವಿಧಾನಪರಿಷತ್ ಮಾಜಿ ಸದಸ್ಯ ಹೆಚ್.ಆರ್.ಶ್ರೀನಾಥ್ ಹೇಳಿದರು. ಅವರು ತಮ್ಮ ನಿವಾಸದಲ್ಲಿ ನಿರ್ಮಲ ತುಂಗಭದ್ರ ಅಭಿಯಾನಕ್ಕೆ ಬೆಂಬಲ ನೀಡಿ ಮಾತನಾಡಿದರು. ನದಿಗಳ ಸ್ವಚ್ಛತೆ ಕುರಿತು ಜನಜಾಗೃತಿ ಅಗತ್ಯವಿದ್ದು, ಕಲಷಿತ ನೀರು ನದಿಪಾತ್ರ ಸೇರದಂತೆ ಕಠಿಣ ಕ್ರಮ ಕೈಗೊಳ್ಳುವ ಅಗತ್ಯವಿದೆ. ತ್ಯಾಜ್ಯಗಳು ನದಿ ಸೇರದಂತೆ ಎಚ್ಚರಿಕೆ ವಹಿಸಬೇಕಿದೆ, ನೀರು ನಮ್ಮ ಜೀವನಕ್ಕೆ ಅತ್ಯಮುಲ್ಯ, ಆರೋಗ್ಯಯುತ ಜೀವನ ಸವೆಸಬೇಕಾದರೆ ದೊಡ್ಡಪ್ರಮಾಣದ ಬದಲಾವಣೆ ಆಗಬೇಕಿದೆ. ಸಚಿವಾಲಯವಾದರೆ ಮಲಿನತೆ ನಿವಾರಣೆಯಾಗಲಿದೆ. ಗಂಗಾವತಿಯಿಂದ ಪಾದಯಾತ್ರೆ ಹೊರಡುವ ಪಾದಯಾತ್ರೆಗೆ ಸಂಪೂರ್ಣ ಬೆಂಬಲ ನೀಡಬೇಕಿದೆ ನಾಗರೀಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು. ಈ ಸಂದರ್ಭದಲ್ಲಿ ನಗರಸಭೆ ಮಾಜಿ ಅಧ್ಯಕ್ಷ ಹನುಮಂತಪ್ಪ ನಾಯಕ, ಸುರೇಶ್ ಗೌರ್ಪ ಇತರರಿದ್ದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 