ಮಹೇಂದ್ರ ಕುಮಾರ್ ನಿಧನಕ್ಕೆ ಎಚ್.ಡಿ.ಕುಮಾರಸ್ವಾಮಿ ಕಂಬನಿ
ಬೆಂಗಳೂರು,ಏ. 25,ಸಾಮಾಜಿಕ ಹೋರಾಟಗಾರ ಮಹೇಂದ್ರ ಕುಮಾರ್ ಅವರ ಹಠಾತ್ ನಿಧನದ ಸುದ್ದಿ ಕೇಳಿ ದಿಗ್ಭ್ರಮೆಯಾಗಿದೆ. ವ್ಯವಸ್ಥೆಯ ತಲ್ಲಣಗಳಿಗೆ ಮಿಡಿಯುತ್ತಿದ್ದ ಜೀವ ಕಮರಿ ಹೋದಂತಾಗಿದೆ ಎಂದು ಮಾಜಿ ಮುಖ್ಯಮಂತ್ರಿ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರೂ ಆಗಿರುವ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.ಮಹೇಂದ್ರ ಕುಮಾರ್ ನಿಧನಕ್ಕೆ ಕಂಬನಿ ಮಿಡಿದಿರುವ ಅವರು, ಹಿಂದೂಪರ ಸಂಘಟನೆಗಳ ಮೂಲಕ ಗುರುತಿಸಿಕೊಂಡಿದ್ದ ಮಹೇಂದ್ರಕುಮಾರ್ ಇದ್ದಕ್ಕಿದ್ದಂತೆ ಬದಲಾಗಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದರು. ತಮ್ಮೊಂದಿಗೆ ಮುಕ್ತವಾಗಿ ಸಮಾಜದ ತಲ್ಲಣಗಳ ಬಗ್ಗೆ ಚರ್ಚಿಸುತ್ತಿದ್ದರು.ಆನಂತರ ಪಕ್ಷ ರಾಜಕೀಯದಿಂದ ದೂರ ಸರಿದ ಅವರು ವ್ಯವಸ್ಥೆಯ ವಿರುದ್ಧ ಸಿಡಿದೇಳುವ ಪ್ರಗತಿಪರ ಚಿಂತಕ ಗುಣವನ್ನು ಬಿಡಲೇ ಇಲ್ಲ. ಆದರೆ ಸಿದ್ಧಾಂತಗಳು ಬದಲಾಗಿದ್ದನ್ನು ತಾವು ಹತ್ತಿರದಿಂದ ಕಂಡಿರುವುದಾಗಿ ಕುಮಾರಸ್ವಾಮಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. 'ನಮ್ಮ ಧ್ವನಿ' ಸಂಘಟನೆ ಹುಟ್ಟುಹಾಕಿದ್ದ ಮಹೇಂದ್ರಕುಮಾರ್ ಈ ಮೂಲಕ ರಾಜ್ಯದಾದ್ಯಂತ ಜೀವಪರ ನಿಲುವನ್ನು ಜಾಗೃತಗೊಳಿಸುವ ಕ್ರಿಯೆಯಲ್ಲಿ ಸಕ್ರಿಯರಾಗಿದ್ದರು. ಅಕಾಲಿಕ ಸಾವನ್ನಪ್ಪಿದ ಮಹೇಂದ್ರ ಕುಮಾರ್ ಅವರ ಅಗಲಿಕೆಯ ನೋವನ್ನು ತಡೆದುಕೊಳ್ಳುವ ಶಕ್ತಿ ಅವರ ಕುಟುಂಬ ಸದಸ್ಯರಿಗೆ ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ. ಅವರ ಆತ್ಮಕ್ಕೆ ಶಾಂತಿ ದಕ್ಕಲಿ ಎಂದು ಕುಮಾರಸ್ವಾಮಿ ಟ್ವೀಟ್ ಮೂಲಕ ಹಾರೈಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 