ಮಂಡ್ಯ, ತುಮಕೂರು ಜಿಲ್ಲೆಯ ಶಾಸಕರೊಂದಿಗೆ ಎಚ್.ಡಿ.ಕುಮಾರಸ್ವಾಮಿ ವಿಡಿಯೋ ಕಾನ್ಫರೆನ್ಸ್
ಬೆಂಗಳೂರು, ಏ.2, ಮಾಜಿ ಮುಖ್ಯಮಂತ್ರಿ ಎಚ್. ಡಿ ಕುಮಾರಸ್ವಾಮಿ ಅವರು ಇಂದು ಮಂಡ್ಯ ಮತ್ತು ತುಮಕೂರು ಜಿಲ್ಲೆಯ ಶಾಸಕರೊಂದಿಗೆ ವಿಡಿಯೊ ಕಾನ್ಫರೆನ್ಸ್ ನಲ್ಲಿ ಚರ್ಚಿಸಿ ಜಿಲ್ಲೆಗಳಲ್ಲಿ ವ್ಯಾಪಕವಾಗುತ್ತಿರುವ ಕೊರೊನಾ ವೈರಸ್ ಮತ್ತು ಲಾಕ್ ಡೌನ್ ಪರಿಣಾಮಗಳ ಬಗ್ಗೆ ಮಾಹಿತಿ ಪಡೆದರು. ವಿಡಿಯೊ ಕಾನ್ಫರೆನ್ಸ್ ನಲ್ಲಿ ಮಂಡ್ಯ ಶಾಸಕ ಶ್ರೀನಿವಾಸ್, ಮೇಲುಕೋಟೆ ಶಾಸಕ ಪುಟ್ಟರಾಜು, ನಾಗಮಂಗಲ ಶಾಸಕ ಸುರೇಶ್ ಗೌಡ, ತುಮಕೂರು ಗ್ರಾಮಾಂತರ ಶಾಸಕ ಗೌರಿಶಂಕರ, ಶಿರಾ ಶಾಸಕ ಸತ್ಯನಾರಾಯಣ ಪಾಲ್ಗೊಂಡಿದ್ದರು. ಕೊರೊನಾ ವೈರಸ್ ತಡೆಗೆ ಎರಡೂ ಜಿಲ್ಲೆಗಳಲ್ಲಿ ಸರ್ಕಾರ ಕೈಗೊಂಡಿರುವ ಕ್ರಮಗಳ ಕುರಿತು ಕುಮಾರಸ್ವಾಮಿ ಚರ್ಚಿಸಿದರು.ಲಾಕ್ ಡೌನ್ ನಿಂದ ಸಮಸ್ಯೆಗೆ ಸಿಲುಕಿರುವವರಿಗೆ, ಪ್ರಮುಖವಾಗಿ ರೈತರಿಗೆ ಎಲ್ಲ ರೀತಿಯ ಸಹಾಯ, ಸಹಕಾರವನ್ನು ಕ್ಷೇತ್ರದ ಮಟ್ಟದಲ್ಲಿ ನೀಡುವಂತೆ ಸೂಚಿಸಿದರು. ರಾಮನಗರ, ಚನ್ನಪಟ್ಟಣದಲ್ಲಿ ತಾವು ಆರಂಭಿಸಿರುವ 'ಎಚ್ಡಿಕೆ ಜನತಾ ದಾಸೋಹ'ವನ್ನು ಎಲ್ಲರೂ ಆರಂಭಿಸಿ ಹಸಿದವರಿಗೆ ಆಹಾರ ಪೂರೈಸುವಂತೆ ತಿಳಿಸಿದರು. ಇದಕ್ಕೆ ಶಾಸಕರು ಒಪ್ಪಿಗೆ ಸೂಚಿಸಿದರು.ಈಗಾಗಲೇ ಕುಮಾರಸ್ವಾಮಿ ರಾಮನಗರ, ಚನ್ನಪಟ್ಟಣ ಭಾಗದ ಶಾಸಕರೊಂದಿಗೆ ವಿಡೀಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿ ಅಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಲಹೆ ಸೂಚನೆ ನೀಡಿದ್ದಾರೆ. ಆ ಭಾಗದಲ್ಲೂ ಎಚ್ಡಿಕೆ ಜನತಾ ದಾಸೋಹ ಆರಂಭಿಸಲು ಸೂಚಿಸಿದ್ದಾರೆ.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 