ಮಂಡ್ಯ, ತುಮಕೂರು ಜಿಲ್ಲೆಯ ಶಾಸಕರೊಂದಿಗೆ ಎಚ್.ಡಿ.ಕುಮಾರಸ್ವಾಮಿ ವಿಡಿಯೋ ಕಾನ್ಫರೆನ್ಸ್
ಬೆಂಗಳೂರು, ಏ.2, ಮಾಜಿ ಮುಖ್ಯಮಂತ್ರಿ ಎಚ್. ಡಿ ಕುಮಾರಸ್ವಾಮಿ ಅವರು ಇಂದು ಮಂಡ್ಯ ಮತ್ತು ತುಮಕೂರು ಜಿಲ್ಲೆಯ ಶಾಸಕರೊಂದಿಗೆ ವಿಡಿಯೊ ಕಾನ್ಫರೆನ್ಸ್ ನಲ್ಲಿ ಚರ್ಚಿಸಿ ಜಿಲ್ಲೆಗಳಲ್ಲಿ ವ್ಯಾಪಕವಾಗುತ್ತಿರುವ ಕೊರೊನಾ ವೈರಸ್ ಮತ್ತು ಲಾಕ್ ಡೌನ್ ಪರಿಣಾಮಗಳ ಬಗ್ಗೆ ಮಾಹಿತಿ ಪಡೆದರು. ವಿಡಿಯೊ ಕಾನ್ಫರೆನ್ಸ್ ನಲ್ಲಿ ಮಂಡ್ಯ ಶಾಸಕ ಶ್ರೀನಿವಾಸ್, ಮೇಲುಕೋಟೆ ಶಾಸಕ ಪುಟ್ಟರಾಜು, ನಾಗಮಂಗಲ ಶಾಸಕ ಸುರೇಶ್ ಗೌಡ, ತುಮಕೂರು ಗ್ರಾಮಾಂತರ ಶಾಸಕ ಗೌರಿಶಂಕರ, ಶಿರಾ ಶಾಸಕ ಸತ್ಯನಾರಾಯಣ ಪಾಲ್ಗೊಂಡಿದ್ದರು. ಕೊರೊನಾ ವೈರಸ್ ತಡೆಗೆ ಎರಡೂ ಜಿಲ್ಲೆಗಳಲ್ಲಿ ಸರ್ಕಾರ ಕೈಗೊಂಡಿರುವ ಕ್ರಮಗಳ ಕುರಿತು ಕುಮಾರಸ್ವಾಮಿ ಚರ್ಚಿಸಿದರು.ಲಾಕ್ ಡೌನ್ ನಿಂದ ಸಮಸ್ಯೆಗೆ ಸಿಲುಕಿರುವವರಿಗೆ, ಪ್ರಮುಖವಾಗಿ ರೈತರಿಗೆ ಎಲ್ಲ ರೀತಿಯ ಸಹಾಯ, ಸಹಕಾರವನ್ನು ಕ್ಷೇತ್ರದ ಮಟ್ಟದಲ್ಲಿ ನೀಡುವಂತೆ ಸೂಚಿಸಿದರು. ರಾಮನಗರ, ಚನ್ನಪಟ್ಟಣದಲ್ಲಿ ತಾವು ಆರಂಭಿಸಿರುವ 'ಎಚ್ಡಿಕೆ ಜನತಾ ದಾಸೋಹ'ವನ್ನು ಎಲ್ಲರೂ ಆರಂಭಿಸಿ ಹಸಿದವರಿಗೆ ಆಹಾರ ಪೂರೈಸುವಂತೆ ತಿಳಿಸಿದರು. ಇದಕ್ಕೆ ಶಾಸಕರು ಒಪ್ಪಿಗೆ ಸೂಚಿಸಿದರು.ಈಗಾಗಲೇ ಕುಮಾರಸ್ವಾಮಿ ರಾಮನಗರ, ಚನ್ನಪಟ್ಟಣ ಭಾಗದ ಶಾಸಕರೊಂದಿಗೆ ವಿಡೀಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿ ಅಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಲಹೆ ಸೂಚನೆ ನೀಡಿದ್ದಾರೆ. ಆ ಭಾಗದಲ್ಲೂ ಎಚ್ಡಿಕೆ ಜನತಾ ದಾಸೋಹ ಆರಂಭಿಸಲು ಸೂಚಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 