ಹಚ್ಚೋಳ್ಳಿ ವಲಯ ಮಟ್ಟದ ಪ್ರೌಢಶಾಲಾ ಗಳ ಕ್ರೀಡಾಕೂಟಕ್ಕೆ ಚಾಲನೆ
ಸಿರುಗುಪ್ಪ 30: ನಗರದ ತಾಲೂಕು ಕ್ರೀಡಾ ಮೈದಾನದಲ್ಲಿ ಹಚ್ಚೋಳ್ಳಿ ವಲಯ ಮಟ್ಟದ ಪ್ರೌಢಶಾಲಾ ಮಕ್ಕಳ ಕ್ರೀಡಾಕೂಟಕ್ಕೆ ಸಂಪನ್ಮೂಲ ಕ್ಷೇತ್ರ ಸಮನ್ವಯಾಧಿಕಾರಿ ತಮ್ಮನ ಗೌಡ ಪಾಟೀಲ್ ಅವರು ಚಾಲನೆ ನೀಡಿ ಮಾತನಾಡುತ್ತಾ ಕ್ರೀಡೆಗಳ ಪಿತಾಮಹಾ ಪ್ರಕ್ಯಾತಿ ಧ್ಯಾನ್ ಚಂದ್ ಅವರ ಜನ್ಮದಿನದ ಹಾಗೂ ರಾಷ್ಟ್ರೀಯ ಕ್ರೀಡಾಕೂಟ ದಿನ ಆಚರಣೆಯ ಪ್ರಯುಕ್ತ ಕ್ರೀಡಾಕೂಟ ಆಯೋಜಿಸಿರುವುದು ಶ್ಲಾಘನೀಯವಾದದು. ವಿದ್ಯಾರ್ಥಿಗಳಲ್ಲಿ ಅಡಗಿರುವ ಕ್ರೀಡಾ ಪ್ರತಿಭೆಯನ್ನು ಪ್ರದರ್ಶಿಸುವ ಮೂಲಕ ಅವರಂತೆ ಉತ್ತಮ ಸಾಧನೆಗೈದು ಸಿರುಗುಪ್ಪ ತಾಲೂಕಿಗೆ ಕೀರ್ತಿ ತರಬೇಕು ಎಂದು ಶುಭ ಹಾರೈಸಿದರು. ದೈಹಿಕ ಶಿಕ್ಷಕ ಮಲ್ಲಿಕಾರ್ಜುನ ಗೌಡ ಅವರು ಮಾತನಾಡಿದರು. ಪ್ರೌಢಶಾಲೆಗಳ ಮಕ್ಕಳ ಕ್ರೀಡಾಕೂಟದಲ್ಲಿ ದೈಹಿಕ ಶಿಕ್ಷಕ ಸಂಘದ ತಾಲೂಕು ಗೌರವ ಅಧ್ಯಕ್ಷ ಉಪೇಂದ್ರ ಅವರಿಗೆ ಸನ್ಮಾನಿಸಲಾಯಿತು.
ಪ್ರಭಾರಿ ದೈಹಿಕ ಶಿಕ್ಷಣಾಧಿಕಾರಿ ಬಿ ರಮೇಶ್, ದೈಹಿಕ ಶಿಕ್ಷಕರ ಸಂಘದ ರಾಜ್ಯ ಉಪಾಧ್ಯಕ್ಷ ಬಿ ಈರಣ್ಣ, ದೈಹಿಕ ಶಿಕ್ಷಕ ಸಂಘದ ಜಿಲ್ಲಾ ಗೌರವಾಧ್ಯಕ್ಷ ಚನ್ನಪ್ಪ, ರಸೂಲ್ ಸಾಬ್, ಜಿಲ್ಲಾ ಸಾಕ್ಷರತಾ ಸದಸ್ಯ ಅಬ್ದುಲ್ ನಬಿ, ಬಿ ಆರ್ ಪಿ ಬಿ ಕಾಳಿಂಗ, ಸಿಆರಿ್ಪಗಳಾದ ರಾಮಚಂದ್ರ, ವಿಜಯಕುಮಾರ್, ಕೋಮಲ ,ರಾಜಶೇಖರ, ದೈಹಿಕ ಶಿಕ್ಷಕರಾದ ಶಾರದ, ಮಲ್ಲಮ್ಮ ಹಾಗೂ ಕ್ರೀಡಾಪಟುಗಳು ವಿದ್ಯಾರ್ಥಿಗಳು ಭಾಗವಹಿಸಿದ್ದರು.