ಹಂಪಿ: ಕರ್ನಾಟಕವನ್ನು ಜಾಗತಿಕ ಪ್ರವಾಸೋದ್ಯಮ ತಾಣವಾಗಿ ರೂಪಿಸುವ ಮಹತ್ವದ ಸಮಾಲೋಚನಾ ಕಾರ್ಯಾಗಾರ ಜುಲೈ 7ರಂದು
Hampi: A significant consultative workshop to transform Karnataka into a global tourism destination
ಬಳ್ಳಾರಿ 06: ಕರ್ನಾಟಕವನ್ನು ಜಾಗತಿಕ ಮಟ್ಟದ ಪ್ರವಾಸೋದ್ಯಮ ತಾಣವಾಗಿ ರೂಪಿಸುವ ಮಹತ್ವಾಕಾಂಕ್ಷೆಯ ಯೋಜನೆಯ ಭಾಗವಾಗಿ ‘ಜಾಗತಿಕ ಗುಣಮಟ್ಟದ ಪ್ರವಾಸಿ ತಾಣಗಳ ಅಭಿವೃದ್ಧಿ’ ಕುರಿತು ರಾಜ್ಯಮಟ್ಟದ ಸಮಾಲೋಚನಾ ಕಾರ್ಯಾಗಾರ ಜುಲೈ 7ರಂದು ಹಂಪಿಯಲ್ಲಿ ಆಯೋಜಿಸಲಾಗಿದೆ.
ಇಂಧನ ಹಾಗೂ ಪ್ರವಾಸೋದ್ಯಮ ಸಚಿವ ಕೆ.ಜೆ. ಜಾರ್ಜ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಮಹತ್ವದ ಸಭೆಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವಾಲಯದ ಜಂಟಿ ಕಾರ್ಯದರ್ಶಿ ಸುಬಾಶಿಶ್ ದಾಸ್, ಕರ್ನಾಟಕ ಪ್ರವಾಸೋದ್ಯಮ ಇಲಾಖೆಯ ಕಾರ್ಯದರ್ಶಿ ಡಾ. ಕೆ.ವಿ. ತ್ರಿಲೋಚನ, ಆಯುಕ್ತ ರಮೇಶ್ ಮನೋಹರ್ ಸೇರಿದಂತೆ ಹಿರಿಯ ಅಧಿಕಾರಿಗಳು ಭಾಗವಹಿಸಲಿದ್ದಾರೆ.
ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ, ಜಂಗಲ್ ಲಾಡ್ಜಸ್ ಅಂಡ್ ರೆಸಾರ್ಟ್ಸ್, ಪ್ರವಾಸೋದ್ಯಮ ವಲಯದ ಹೂಡಿಕೆದಾರರು, ಆತಿಥ್ಯ ಉದ್ಯಮದ ಪ್ರತಿನಿಧಿಗಳು ಹಾಗೂ ತಜ್ಞರು ಈ ಕಾರ್ಯಾಗಾರದಲ್ಲಿ ಪಾಲ್ಗೊಳ್ಳಲಿದ್ದಾರೆ.
ರಾಜ್ಯದ ಪ್ರವಾಸೋದ್ಯಮ ಕ್ಷೇತ್ರಕ್ಕೆ ಹೊಸ ದಿಕ್ಕು ನೀಡುವ ಉದ್ದೇಶದಿಂದ ಆಯೋಜಿಸಿರುವ ಈ ಸಭೆಯಲ್ಲಿ, ಜಾಗತಿಕ ಗುಣಮಟ್ಟದ ಪ್ರವಾಸಿ ತಾಣಗಳ ಅಭಿವೃದ್ಧಿಗೆ ಅಗತ್ಯವಾದ ಮೂಲಸೌಕರ್ಯ, ಹೂಡಿಕೆ ಅವಕಾಶಗಳು, ಪ್ರವಾಸಿಗರ ಅನುಭವ ಸುಧಾರಣೆ, ಪರಿಸರ ಸಂರಕ್ಷಣೆ, ಸ್ಥಳೀಯ ಸಮುದಾಯದ ಭಾಗವಹಿಕೆ, ಸಂಪರ್ಕ ವ್ಯವಸ್ಥೆ, ಬ್ರ್ಯಂಡಿಂಗ್ ಮತ್ತು ಅಂತಾರಾಷ್ಟ್ರೀಯ ಮಾರುಕಟ್ಟೆ ತಂತ್ರಗಳ ಕುರಿತು 360 ಡಿಗ್ರಿ ಚರ್ಚೆ ನಡೆಯಲಿದೆ.
ಪ್ರವಾಸಿ ತಾಣಗಳ ಆಯ್ಕೆಗಾಗಿ ಮಾನದಂಡಗಳು, ಮೂಲಸೌಕರ್ಯ ಅಭಿವೃದ್ಧಿ, ಪ್ರವಾಸಿಗರ ಅನುಭವ ಸುಧಾರಣೆ, ಖಾಸಗಿ ಹೂಡಿಕೆ ಉತ್ತೇಜನ, ಪರಿಸರ ಸಂರಕ್ಷಣೆ ಹಾಗೂ ಸಸ್ಥಿರ ಪ್ರವಾಸೋದ್ಯಮ ಮಾದರಿಗಳ ಕುರಿತು ತಜ್ಞರು ತಮ್ಮ ಅಭಿಪ್ರಾಯಗಳನ್ನು ಮಂಡಿಸಲಿದ್ದಾರೆ.
ಸಭೆಯಲ್ಲಿ ವ್ಯಕ್ತವಾಗುವ ಸಲಹೆಗಳು ಮತ್ತು ಶಿಫಾರಸುಗಳ ಆಧಾರದ ಮೇಲೆ ರಾಜ್ಯದ ಮೊದಲ ಹಂತದಲ್ಲಿ ಜಾಗತಿಕ ಗುಣಮಟ್ಟದ ಪ್ರವಾಸಿ ತಾಣಗಳಾಗಿ ಅಭಿವೃದ್ಧಿಪಡಿಸಬಹುದಾದ ಸ್ಥಳಗಳನ್ನು ಅಂತಿಮಗೊಳಿಸುವ ನಿರ್ಧಾರ ಕೈಗೊಳ್ಳಲಾಗುವುದು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 