ತಾಲೂಕಾ ಘಟಕದ ಅಧ್ಯಕ್ಷರಾಗಿ ಹಾರೂಗೇರಿ ಆಯ್ಕೆ
ರಾಯಬಾಗ 28: ಕರ್ನಾಟಕ ರಾಜ್ಯ ಸರ್ಕಾರಿ ನೌಕಕರ ಸಂಘದ ತಾಲೂಕಾ ಘಟಕದ ಅಧ್ಯಕ್ಷರಾಗಿ ಉಪಖಜಾನೆಯ ಇಲಾಖೆ ನೌಕರ ವಿಶ್ವನಾಥ ಹಾರೂಗೇರಿ ಆಯ್ಕೆಯಾದರು.
ಶುಕ್ರವಾರದಂದು ಅಧ್ಯಕ್ಷ ಸ್ಥಾನಕ್ಕಾಗಿ ನಡೆದ ಚುನಾವಣೆಯಲ್ಲಿ 20 ಮತಗಳನ್ನು ಪಡೆದು ಬಹುಮತದಿಂದ ಆಯ್ಕೆಯಾದರು. ಇವರ ಪ್ರತಿಸ್ಪರ್ದೇಯಾಗಿ ಚುನಾವಣೆ ಕಣದಲ್ಲಿದ್ದ ಹಾಲಿ ಅಧ್ಯಕ್ಷ ಆಯ್.ಆರ್.ನದಾಫ ರವರು ಕೇವಲ 6 ಮತಗಳನ್ನು ಪಡೆದು ಪರಾಭವಗೊಂಡರು. ವಿವಿಧ ಇಲಾಖೆಯಿಂದ ಆಯ್ಕೆಗೊಂಡಿದ್ದ 26 ಸದಸ್ಯರು ಮತಚಲಾಯಿಸಿದರು.
ನೀರಾವರಿ ಇಲಾಖೆ ಅಭಿಯಂತರ ನಿವಾಸ ಕಾಂಬಳೆ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದರು. ಉಮೇಶ ಪೋಳ, ಎಸ್.ಎಸ್.ಪಾಟೀಲ, ಎಚ್.ಎಚ್.ನಾಗನ್ನವರ, ಶಿವಾನಂದ ಹುಲಬಾಳಿ, ಶಿವಪುತ್ರ ಹಾಡಕರ ಸೇರಿದಂತೆ ಅನೇಕರು ನೂತನ ಅಧ್ಯಕ್ಷರನ್ನು ಅಭಿನಂದಿಸಿದರು.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 