ತಾಲೂಕಾ ಘಟಕದ ಅಧ್ಯಕ್ಷರಾಗಿ ಹಾರೂಗೇರಿ ಆಯ್ಕೆ
ರಾಯಬಾಗ 28: ಕರ್ನಾಟಕ ರಾಜ್ಯ ಸರ್ಕಾರಿ ನೌಕಕರ ಸಂಘದ ತಾಲೂಕಾ ಘಟಕದ ಅಧ್ಯಕ್ಷರಾಗಿ ಉಪಖಜಾನೆಯ ಇಲಾಖೆ ನೌಕರ ವಿಶ್ವನಾಥ ಹಾರೂಗೇರಿ ಆಯ್ಕೆಯಾದರು.
ಶುಕ್ರವಾರದಂದು ಅಧ್ಯಕ್ಷ ಸ್ಥಾನಕ್ಕಾಗಿ ನಡೆದ ಚುನಾವಣೆಯಲ್ಲಿ 20 ಮತಗಳನ್ನು ಪಡೆದು ಬಹುಮತದಿಂದ ಆಯ್ಕೆಯಾದರು. ಇವರ ಪ್ರತಿಸ್ಪರ್ದೇಯಾಗಿ ಚುನಾವಣೆ ಕಣದಲ್ಲಿದ್ದ ಹಾಲಿ ಅಧ್ಯಕ್ಷ ಆಯ್.ಆರ್.ನದಾಫ ರವರು ಕೇವಲ 6 ಮತಗಳನ್ನು ಪಡೆದು ಪರಾಭವಗೊಂಡರು. ವಿವಿಧ ಇಲಾಖೆಯಿಂದ ಆಯ್ಕೆಗೊಂಡಿದ್ದ 26 ಸದಸ್ಯರು ಮತಚಲಾಯಿಸಿದರು.
ನೀರಾವರಿ ಇಲಾಖೆ ಅಭಿಯಂತರ ನಿವಾಸ ಕಾಂಬಳೆ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದರು. ಉಮೇಶ ಪೋಳ, ಎಸ್.ಎಸ್.ಪಾಟೀಲ, ಎಚ್.ಎಚ್.ನಾಗನ್ನವರ, ಶಿವಾನಂದ ಹುಲಬಾಳಿ, ಶಿವಪುತ್ರ ಹಾಡಕರ ಸೇರಿದಂತೆ ಅನೇಕರು ನೂತನ ಅಧ್ಯಕ್ಷರನ್ನು ಅಭಿನಂದಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 