ಕೆಎಸ್ಆರ್ಟಿಸಿ ಬಸ್-ಲಾರಿ ಮುಖಾಮುಖಿ ಡಿಕ್ಕಿ: ಇಬ್ಬರು ಚಾಲಕರಿಗೆ ಗಂಭೀರ ಗಾಯ, ಹಲವರಿಗೆ ಗಾಯ
Head-on collision between KSRTC bus and lorry: Two drivers critically injured, several others hurt
ಮುಂಡಗೋಡು, ಜು.12: ತಾಲ್ಲೂಕಿನ ಕಾವಲಕೊಪ್ಪ ತಿರುವಿನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕೆಎಸ್ಆರ್ಟಿಸಿ ಬಸ್ ಮತ್ತು ಲಾರಿ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ಇಬ್ಬರು ಚಾಲಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆಯಲ್ಲಿ ಹತ್ತಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವುದಾಗಿ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಹಾನಗಲ್ನಿಂದ ಮುಂಡಗೋಡಿನತ್ತ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್ ಹಾಗೂ ಮುಂಡಗೋಡು ಕಡೆಯಿಂದ ಶಿರಸಿಯತ್ತ ತೆರಳುತ್ತಿದ್ದ ಲಾರಿ ಕಾವಲಕೊಪ್ಪ ತಿರುವಿನಲ್ಲಿ ಮುಖಾಮುಖಿಯಾಗಿ ಡಿಕ್ಕಿ ಹೊಡೆದಿವೆ.
ಡಿಕ್ಕಿಯ ತೀವ್ರತೆಗೆ ಬಸ್ ಮತ್ತು ಲಾರಿಯ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಅಪಘಾತದ ಮಾಹಿತಿ ತಿಳಿದ ಕೂಡಲೇ ಮುಂಡಗೋಡು ಪೊಲೀಸರು ಸ್ಥಳಕ್ಕೆ ಧಾವಿಸಿ, ಸ್ಥಳೀಯರ ನೆರವಿನಿಂದ ರಕ್ಷಣಾ ಕಾರ್ಯ ಕೈಗೊಂಡರು. ಗಂಭೀರವಾಗಿ ಗಾಯಗೊಂಡಿರುವ ಬಸ್ ಹಾಗೂ ಲಾರಿ ಚಾಲಕರು ಮತ್ತು ಗಾಯಾಳು ಪ್ರಯಾಣಿಕರನ್ನು ತಕ್ಷಣ ಮುಂಡಗೋಡು ತಾಲ್ಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಮುಂಡಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 