ಆರೋಗ್ಯ ಇಲಾಖೆ ಸಿಬ್ಬಂದಿ, ಅಧಿಕಾರಿಗಳಿಗೆ ಸದ್ಯಕ್ಕೆ ರಜೆ ಇಲ್ಲ
ಬೆಂಗಳೂರು, ಆ 8 ತೀವ್ರ ನೆರೆಹಾವಳಿಗೆ ತುತ್ತಾಗಿರುವ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಆರೋಗ್ಯ ಇಲಾಖೆಯ ಸಿಬ್ಬಂದಿ, ಅಧಿಕಾರಿಗಳಿಗೆ ಸದ್ಯಕ್ಕೆ ಯಾವುದೇ ರಜೆಯಿಲ್ಲ ಈ ಸಂಬಂಧ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದು, ಯಾವುದೇ ಅಧಿಕಾರಿ, ಸಿಬ್ಬಂದಿಗೆ ಸದ್ಯಕ್ಕೆ ರಜೆ ಮಂಜೂರು ಮಾಡದಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗು, ಗದಗ, ಚಿಕ್ಕಮಗಳೂರು, ಹಾವೇರಿ, ಶಿವಮೊಗ್ಗ, ಬೀದರ್, ಬೆಳಗಾವಿ, ಚಿಕ್ಕೋಡಿ, ರಾಯಚೂರು, ಬಾಗಲಕೋಟೆ, ಯಾದಗಿರಿ, ವಿಜಯಪುರ, ಕೊಪ್ಪಳ, ಧಾರವಾಡ, ಬಳ್ಳಾರಿ, ಹಾಸನ, ಉಡುಪಿ ಹಾಗೂ ಕಲಬುರ್ಗಿ ಜಿಲ್ಲೆಗಳಲ್ಲಿ ತೀವ್ರ ನೆರೆಹಾವಳಿ ತಲೆದೋರಿದೆ. ಈ ಜಿಲ್ಲೆಗಳಲ್ಲಿ ನೆರೆಹಾವಳಿ ಕಡಿಮೆಯಾಗಿ ಪರಿಸ್ಥಿತಿ ಸುಧಾರಿಸುವವರೆಗೆ ಜಿಲ್ಲಾಧಿಕಾರಿಗಳು ಆಡಳಿತಾತ್ಮಕ ವಿಷಯಗಳಿಗೆ ಸಂಬಂಧಿಸಿದಂತೆ ನಿರ್ಣಯಗಳನ್ನು ಕೈಗೊಳ್ಳುವವರೆಗೂ ಯಾರಿಗೂ ಆ. 9 ರಿಂದ 15 ರವರೆಗೆ ನಿರ್ಬಂಧಿತ ರಜೆ, ಸಾರ್ವತ್ರಿಕ ರಜೆಯನ್ನೊಳಗೊಂಡಂತೆ ಯಾವುದೇ ರೀತಿಯ ರಜೆಯನ್ನು ಮಂಜೂರು ಮಾಡಬಾರದೆಂದು ಸೂಚನೆಯಲ್ಲಿ ತಿಳಿಸಲಾಗಿದೆ.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 