ಬಳ್ಳಾರಿ ಜಿಲ್ಲಾಸ್ಪತ್ರೆ ಐಸೋಲೆಟೆಡ್ ವಾರ್ಡ್ ಗೆ ಆರೋಗ್ಯ ಸಚಿವ ಶ್ರೀರಾಮುಲು ಭೇಟಿ
ಬಳ್ಳಾರಿ, ಮಾ. 26, ಬಳ್ಳಾರಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಆರೋಗ್ಯ ಸಚಿವ ಶ್ರೀರಾಮುಲು ಅವರು ಕೋವಿಡ್-19 ಹರಡುವಿಕೆ ತಡೆಯಲು ಮುಂಜಾಗ್ರತಾ ಪರಿಶೀಲನಾ ಸಭೆಯನ್ನು ನಡೆಸಿದ್ದಾರೆ. ಜನಪ್ರತಿನಿಧಿಗಳು, ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು. ಸಭೆಯ ಬಳಿಕ ಬಳ್ಳಾರಿ ಜಿಲ್ಲಾ ಆಸ್ಪತ್ರೆ ಕೊವಿಡ್-19 ಐಸೊಲೇಟೆಡ್ ವಾರ್ಡ್ ಗೆ ಖುದ್ದಾಗಿ ಸಚಿವರು ಭೇಟಿ ಕೊಟ್ಟು ಶಂಕಿತರಲ್ಲಿ ಭರವಸೆ ತುಂಬಿದ್ದಾರೆ. ಶ್ರೀರಾಮುಲು ಅವರು ಸಂಪೂರ್ಣ ಸುರಕ್ಷಿತ ಮಾಸ್ಕ್, ಡ್ರೆಸ್ ಕೋಡ್ ಹಾಗೂ ಗ್ಲೌಸ್ ಧರಿಸಿ ಚಿಕಿತ್ಸೆ ಪಡೆಯುತ್ತಿರುವ ಶಂಕಿತರಲ್ಲಿ ಧೈರ್ಯ ತುಂಬಿದ್ದಾರೆ. ಯಾವುದೇ ಆತಂಕಕ್ಕೆ ಒಳಗಾಗದಂತೆ ಚಿಕಿತ್ಸೆ ಪಡೆಯುವಂತೆ ತಿಳುವಳಿಕೆ ಮೂಡಿಸಿದ್ದಾರೆ.ಇದೇ ಸಂದರ್ಭದಲ್ಲಿ ಕೊರೊನಾ ವೈರಸ್ ಹರಡದಂತೆ ತಡೆಯಲು ರಚಿಸಲಾಗಿರುವ ಟಾಸ್ಕ್ ಫೋರ್ಸ್ ಟೀಂ ಪರಿಶೀಲನೆಯನ್ನು ಇದೇ ಸಂದರ್ಭದಲ್ಲಿ ಸಚಿವ ಶ್ರೀರಾಮುಲು ಅವರು ಮಾಡಿದ್ದಾರೆ.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 