ಮಹಿಳೆಯರಿಗೆ ಆರೋಗ್ಯ ತಪಾಸಣೆ ಶಿಬಿರ
Health check up camp for women
ಯರಗಟ್ಟಿ 21: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಸಮಗ್ರ ಗ್ರಾಮೀಣ ಅಭಿವೃದ್ಧಿಗೆ ನಾನಾ ಯೋಜನೆಗಳನ್ನು ಕೈಗೊಂಡಿದ್ದು ಸತ್ತಿಗೇರಿ ವಲಯದ ಎಂ. ಟಿ ನರಗುಂದ ಪ್ರೌಢ ಶಾಲೆಗಳ ವಿದ್ಯಾರ್ಥಿಗಳಿಗೆ ಟ್ಯೂಷನ್ ಸಹ ನೀಡುತ್ತಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಜಿಲ್ಲಾ ನಿರ್ದೇಶಕರರಾದ ಎಚ್. ಆರ್. ಲವಕುಮಾರ ಹೇಳಿದರು.ಸಮೀಪದ ತೋರಣಗಟ್ಟಿ ಗ್ರಾಮದ ಎಂ. ಟಿ. ನರಗುಂದ ಪ್ರೌಢಶಾಲೆಯಲ್ಲಿ ಟ್ಯೂಷನ್ ಕ್ಲಾಸ್ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿ, ಸಮಾಜದ ಹಿತದೃಷ್ಟಿಯಲ್ಲಿ ಮಹಿಳೆಯರಿಗೆ ತರಬೇತಿ ಆರೋಗ್ಯ ತಪಾಸಣೆ ಶಿಬಿರ, ಪ್ರಾಣಿಗಳು ಹಾಗೂ ಪಕ್ಷಿಗಳಿಗೆ ಬೇಸಿಗೆಯಲ್ಲಿ ಕುಡಿಯುವ ನೀರಿಗಾಗಿ ಕೆರೆ ನಿರ್ಮಾಣ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸುಜ್ಞಾನ ನಿಧಿ, ಮಾಸಾಶನ, ವಾತ್ಸಲ್ಯ ಕಾರ್ಯಕ್ರಮದಲ್ಲಿ ನಿರ್ಗತಿಕರಿಗೆ ಮನೆ ನಿರ್ಮಾಣ ಮುಂತಾದ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ.
ವಿದ್ಯಾರ್ಥಿಗಳು ಉತ್ತಮ ಅಂಕಗಳಿಸಲು ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಟ್ಯೂಷನ್ ಕ್ಲಾಸ್ ನಡೆಸಲಾಗುತ್ತಿದೆ ಎಂದು ಹೇಳಿದರು.ಶಾಲೆಯ ಪ್ರಧಾನ ಗುಂರುಗಳಾದ ಕೆ. ಡಿ. ಅಚನೂರ ಮಾತನಾಡಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಮಕ್ಕಳಿಗೆ ಟ್ಯೂಷನ್ ಕೊಡುತ್ತಿರುವುದರಿಂದ ಮಕ್ಕಳಿಗೆ ಕಲಿಕೆ ಮಟ್ಟ ಸುಧಾರಿಸಿ ಹೆಚ್ಚಿನ ಫಲಿತಾಂಶ ಬರಲು ಸಾಧ್ಯವಾಗಿದೆ ಎಂದು ಕೃತಜ್ಞತೆ ವ್ಯಕ್ತಪಡಿಸಿದರು.ನಂತರ ಮಕ್ಕಳಿಗೆ ಪುಸ್ತಕ ಮತ್ತು ಪೆನ್ ನೀಡಲಾಯಿತು. ಶಾಲೆಯ ಸಹಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಇದ್ದರು.ಈ ವೇಳೆ ತಾಲೂಕು ಯೋಜನಾಧಿಕಾರಿ ಶ್ರೀಕಾಂತ ಎಮ್, ಡಿ. ಕೆ. ದಂಡಿನ, ಟಿ. ಎಂ. ಸತ್ತಿಗೇರಿ, ಆರ್. ಎಂ. ಮುಂಗುಜೆ, ಮಂಜುನಾಥ ಕೋರಿಶೆಟ್ಟಿ, ಎಸ್.ಎಸ್. ಸಿಂಗಾರಗೋಪ್ಪ, ಎಂ. ಎಂ. ಕಾಂತಿಮಠ, ರಮೇಶ ಉಪ್ಪಾರ, ಜ್ಞಾನವಿಕಾಸ ಸಮನ್ವಯಾಧಿಕಾರಿ ನಿಶಾ ನಾಯ್ಕ, ಸೇವಾ ಪ್ರತಿನಿಧಿ ಹನುಮವ್ವ ಸೇರಿದಂತೆ ವಿದ್ಯಾರ್ಥಿಗಳು ಇದ್ದರು.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 